ಕೊನೆಗೂ ಸಿಕ್ಕಿಬಿದ್ದ ಶನಿಮಹಾತ್ಮ ದೇವಾಲಯಕ್ಕೆ ಮಾಂಸದ ತುಂಡು ತಂದಿದ್ದ ಆರೋಪಿಗಳು

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಕನಸವಾಡಿ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಮಾಂಸದ ತುಂಡುಗಳನ್ನು ಒಳಗೊಂಡ ಹೂವಿನ ಹಾರ ತಂದಿದ್ದ ಆರೋಪಿಗಳನ್ನು ಶನಿವಾರ ದೇವಾಲಯದ ಸಿಬ್ಬಂದಿ ಪತ್ತೆಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಗಳು ಹೊಸಕೋಟೆ ತಾಲ್ಲೂಕಿನ ಕಂಬಲಹಳ್ಳಿ ರಾಜು ಹಾಗೂ ವೈಟ್ ಫೀಲ್ಡ್ ಮೂಲದ ಆಟೋಚಾಲಕ ಸೋಮಶೇಖರ್ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಆರೋಪಿಗಳು ಒಂದು ತಿಂಗಳ ಹಿಂದೆಯು ಸಹ ಮಧ್ಯಾಹ್ನದ ಸಮಯದಲ್ಲಿ ದೇವಾಲಯಕ್ಕೆ ಬಂದು ಹೂವಿನ ಹಾರಗಳೊಂದಿಗೆ ಮಾಸಂದ ತುಂಡುಗಳನ್ನು ಪೋಣಿಸಿ ಸಿದ್ಧಪಡಿಸಲಾಗಿದ್ದ ಹಾರವನ್ನು ತಂದಿದ್ದರು.

ಮಧ್ಯಾಹ್ನದ ಸಮಯವಾಗಿದ್ದರಿಂದ ದೇವಾಲಯದ ಸಿಬ್ಬಂದಿ ಹೂವಿನ ಹಾರದ ಪ್ಲಾಸ್ಟಿಕ್ ಕವರ್ ನ್ನು ಬಾಗಿಲಿನಲ್ಲೇ ಪಡೆದು ಸಂಜೆಯ ಅಲಂಕಾರಕ್ಕೆ ಬಳಸಲಾಗುವುದು ಎಂದು ಹೇಳಿ ಕಳುಹಿಸಿದ್ದರು. ಸಂಜೆ ಹಾರಗಳನ್ನು ತೆಗೆದು ನೀರು ಹಾಕುವಾಗ ಮಾಂಸದ ತುಂಡುಗಳನ್ನು ಪೋಣಿಸಿದ್ದು ಬೆಳಕಿಗೆ ಬಂದಿತ್ತು.

ಆರೋಪಿಗಳು ದೇವಾಲಯಕ್ಕೆ ಬಂದು ಹೋಗಿದ್ದ ಎಲ್ಲಾ ದೃಶ್ಯಗಳನ್ನು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದದವು. ಈ ದೃಶ್ಯಗಳನ್ನು ಆದರಿಸಿ ದೊಡ್ಡಬೆಳವಂಗಲ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು ಆರೋಪಿಗಳು ಪತ್ತೆಯಾಗಿರಲಿಲ್ಲ. ಶನಿವಾರ ಮತ್ತೆ ಇದೇ ಆರೋಪಿಗಳು ದೇವಾಲಯಕ್ಕೆ ಹಾರ ಕೊಡಲು ಬಂದಾಗ ಸಿಸಿ ಟಿವಿ ದೃಶ್ಯಗಳ ಮೇಲೆ ತೀವ್ರ ನಿಗಾವಹಿಸಿದ್ದ ದೇವಾಲಯದ ಸಿಬ್ಬಂದಿ ಆರೋಪಿಗಳನ್ನು ಗುರುತಿಸಿ ಹಾರ ಕೊಡುವ ಸಂದರ್ಭದಲ್ಲೇ ಬಂಧಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಧಾರ್ಮಿಕ ಸ್ಥಳ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago