ಕೊನೆಗೂ ಸಿಕ್ಕಿಬಿದ್ದ ಶನಿಮಹಾತ್ಮ ದೇವಾಲಯಕ್ಕೆ ಮಾಂಸದ ತುಂಡು ತಂದಿದ್ದ ಆರೋಪಿಗಳು

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಕನಸವಾಡಿ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಮಾಂಸದ ತುಂಡುಗಳನ್ನು ಒಳಗೊಂಡ ಹೂವಿನ ಹಾರ ತಂದಿದ್ದ ಆರೋಪಿಗಳನ್ನು ಶನಿವಾರ ದೇವಾಲಯದ ಸಿಬ್ಬಂದಿ ಪತ್ತೆಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಗಳು ಹೊಸಕೋಟೆ ತಾಲ್ಲೂಕಿನ ಕಂಬಲಹಳ್ಳಿ ರಾಜು ಹಾಗೂ ವೈಟ್ ಫೀಲ್ಡ್ ಮೂಲದ ಆಟೋಚಾಲಕ ಸೋಮಶೇಖರ್ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಆರೋಪಿಗಳು ಒಂದು ತಿಂಗಳ ಹಿಂದೆಯು ಸಹ ಮಧ್ಯಾಹ್ನದ ಸಮಯದಲ್ಲಿ ದೇವಾಲಯಕ್ಕೆ ಬಂದು ಹೂವಿನ ಹಾರಗಳೊಂದಿಗೆ ಮಾಸಂದ ತುಂಡುಗಳನ್ನು ಪೋಣಿಸಿ ಸಿದ್ಧಪಡಿಸಲಾಗಿದ್ದ ಹಾರವನ್ನು ತಂದಿದ್ದರು.

ಮಧ್ಯಾಹ್ನದ ಸಮಯವಾಗಿದ್ದರಿಂದ ದೇವಾಲಯದ ಸಿಬ್ಬಂದಿ ಹೂವಿನ ಹಾರದ ಪ್ಲಾಸ್ಟಿಕ್ ಕವರ್ ನ್ನು ಬಾಗಿಲಿನಲ್ಲೇ ಪಡೆದು ಸಂಜೆಯ ಅಲಂಕಾರಕ್ಕೆ ಬಳಸಲಾಗುವುದು ಎಂದು ಹೇಳಿ ಕಳುಹಿಸಿದ್ದರು. ಸಂಜೆ ಹಾರಗಳನ್ನು ತೆಗೆದು ನೀರು ಹಾಕುವಾಗ ಮಾಂಸದ ತುಂಡುಗಳನ್ನು ಪೋಣಿಸಿದ್ದು ಬೆಳಕಿಗೆ ಬಂದಿತ್ತು.

ಆರೋಪಿಗಳು ದೇವಾಲಯಕ್ಕೆ ಬಂದು ಹೋಗಿದ್ದ ಎಲ್ಲಾ ದೃಶ್ಯಗಳನ್ನು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದದವು. ಈ ದೃಶ್ಯಗಳನ್ನು ಆದರಿಸಿ ದೊಡ್ಡಬೆಳವಂಗಲ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು ಆರೋಪಿಗಳು ಪತ್ತೆಯಾಗಿರಲಿಲ್ಲ. ಶನಿವಾರ ಮತ್ತೆ ಇದೇ ಆರೋಪಿಗಳು ದೇವಾಲಯಕ್ಕೆ ಹಾರ ಕೊಡಲು ಬಂದಾಗ ಸಿಸಿ ಟಿವಿ ದೃಶ್ಯಗಳ ಮೇಲೆ ತೀವ್ರ ನಿಗಾವಹಿಸಿದ್ದ ದೇವಾಲಯದ ಸಿಬ್ಬಂದಿ ಆರೋಪಿಗಳನ್ನು ಗುರುತಿಸಿ ಹಾರ ಕೊಡುವ ಸಂದರ್ಭದಲ್ಲೇ ಬಂಧಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಧಾರ್ಮಿಕ ಸ್ಥಳ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago