ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತ ತಂಡ 4-1 ಅಂತರದಿಂದ ಗೆಲುವು ಸಾಧಿಸುವ ಮೂಲಕ ಆಸೀಸ್ ಗೆ ಆಘಾತ ನೀಡಿದೆ.
ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿ ಸೋಲಿನ ಅಂತರವನ್ನು ಕಡಿಮೆ ಮಾಡುವ ಆಸೆ ಈಡೇರಲಿಲ್ಲ, ಆಸ್ಟ್ರೇಲಿಯಾದ ನಾಯಕ ಮ್ಯಾಥ್ಯೂ ವೆಡ್ ಐದು ಪಂದ್ಯಗಳಲ್ಲಿ ಟಾಸ್ ಗೆದ್ದರೂ ಮ್ಯಾಚ್ ಗೆದ್ದಿದ್ದು ಕೇವಲ ಒಂದು ಪಂದ್ಯದಲ್ಲಿ ಮಾತ್ರ.
ಆಸೀಸ್ ಅಂತಿಮ ಪಂದ್ಯದ ಟಾಸ್ ಗೆದ್ದರೂ ಬೌಲಿಂಗ್ ಆಯ್ದುಕೊಂಡ ಕಾರಣ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಈ ಬಾರಿ ಆರಂಭಿಕ ಆಘಾತ ಎದುರಿಸಿತು ಯಶಸ್ವಿ ಜೈಸ್ವಾಲ್ (21) ಹಾಗೂ ಋತುರಾಜ್ ಗಾಯಕ್ವಾಡ್ (10) ರನ್ ಗಳಿಸಿ ಔಟಾದರು.
ನಂತರ ಬಂದ ಶ್ರೇಯಸ್ ಅಯ್ಯರ್ (53) ತಂಡದ ಮೊತ್ತವನ್ನು ಹೆಚ್ಚಿಸಲು ಮುಂದಾದರು, ಆದರೆ ನಾಯಕ ಸೂರ್ಯ ಕುಮಾರ್ ಯಾದವ್ (5) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ರಿಂಕು ಸಿಂಗ್ (6) ನಿರಾಸೆ ಮೂಡಿಸಿದರು, ಆದರೆ ಜಿತೇಶ್ ಶರ್ಮಾ (24) ಹಾಗೂ ಅಕ್ಷರ್ ಪಟೇಲ್ (31) ತಂಡದ ಮೊತ್ತವನ್ನು 160 ರನ್ ಗಡಿ ದಾಟಿಸಿದರು.
ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಟಗಾರ ಫಿಲಿಪ್ಸ್ (4) ಮುಖೇಶ್ ಕುಮಾರ್ ಬೌಲಿಂಗ್ ನಲ್ಲಿ ಔಟಾದರು, ಆದರೆ ಹೆಡ್ (24) ಹಾಗೂ ಬೆನ್ (54) ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ನಂತರ ಬಂದ ಯಾವುದೇ ಆಟಗಾರರು ಹೆಚ್ಚು ಹೊತ್ತು ನಿಲ್ಲಲಿಲ್ಲ, ಹಾಡಿ೯ (6), ಟೀಮ್ ಡೇವಿಡ್ (17) , ಶಾಟ್೯(16) ಹಾಗೂ ನಾಯಕ ಮ್ಯಾಥ್ಯೂ ವೆಡ್ (22) ರನ್ ಗಳಿಸಿದ್ದರೂ ಅದು ಜಯ ಸಾಧಿಸಲು ಸಾಧ್ಯವಾಗಲಿಲ್ಲ.
ಭಾರತ ತಂಡದ ಪರವಾಗಿ ಮುಖೇಶ್ ಕುಮಾರ್ ಮೂರು, ಅಶ೯ದೀಪ್ ಸಿಂಗ್ ಹಾಗೂ ರವಿ ಬಿಷ್ಣೋಯಿ ಎರಡು ವಿಕೆಟ್ ಕಬಳಿಸಿದರೆ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು, ಅಲ್ ರೌಂಡರ್ ಆಟವಾಡಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ ಟೂರ್ನಿಯುದ್ದಕ್ಕೂ ಉತ್ತಮ ಬೌಲಿಂಗ್ ಪ್ರದರ್ಶನ ಮಾಡಿದ್ದ ರವಿ ಬಿಷ್ಣೋಯಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…