ಕೊನೆಯ ಪಂದ್ಯದಲ್ಲೂ ಮುಗ್ಗುರಿಸಿದ ಆಸೀಸ್, ಭಾರತಕ್ಕೆ 4-1 ಅಂತರದ ಜಯ !

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತ ತಂಡ 4-1 ಅಂತರದಿಂದ ಗೆಲುವು ಸಾಧಿಸುವ ಮೂಲಕ ಆಸೀಸ್ ಗೆ ಆಘಾತ ನೀಡಿದೆ.

ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿ ಸೋಲಿನ ಅಂತರವನ್ನು ಕಡಿಮೆ ಮಾಡುವ ಆಸೆ ಈಡೇರಲಿಲ್ಲ, ಆಸ್ಟ್ರೇಲಿಯಾದ ನಾಯಕ ಮ್ಯಾಥ್ಯೂ ವೆಡ್ ಐದು ಪಂದ್ಯಗಳಲ್ಲಿ ಟಾಸ್ ಗೆದ್ದರೂ ಮ್ಯಾಚ್ ಗೆದ್ದಿದ್ದು ಕೇವಲ ಒಂದು ಪಂದ್ಯದಲ್ಲಿ ಮಾತ್ರ.

ಆಸೀಸ್ ಅಂತಿಮ ಪಂದ್ಯದ ಟಾಸ್ ಗೆದ್ದರೂ ಬೌಲಿಂಗ್ ಆಯ್ದುಕೊಂಡ ಕಾರಣ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಈ ಬಾರಿ ಆರಂಭಿಕ ಆಘಾತ ಎದುರಿಸಿತು ಯಶಸ್ವಿ ಜೈಸ್ವಾಲ್ (21) ಹಾಗೂ ಋತುರಾಜ್ ಗಾಯಕ್ವಾಡ್ (10) ರನ್ ಗಳಿಸಿ ಔಟಾದರು.

ನಂತರ ಬಂದ ಶ್ರೇಯಸ್ ಅಯ್ಯರ್ (53) ತಂಡದ ಮೊತ್ತವನ್ನು ಹೆಚ್ಚಿಸಲು ಮುಂದಾದರು, ಆದರೆ ನಾಯಕ ಸೂರ್ಯ ಕುಮಾರ್ ಯಾದವ್ (5) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ರಿಂಕು ಸಿಂಗ್ (6) ನಿರಾಸೆ ಮೂಡಿಸಿದರು, ಆದರೆ ಜಿತೇಶ್ ಶರ್ಮಾ (24) ಹಾಗೂ ಅಕ್ಷರ್ ಪಟೇಲ್ (31) ತಂಡದ ಮೊತ್ತವನ್ನು 160 ರನ್ ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಟಗಾರ ಫಿಲಿಪ್ಸ್ (4) ಮುಖೇಶ್ ಕುಮಾರ್ ಬೌಲಿಂಗ್ ನಲ್ಲಿ ಔಟಾದರು, ಆದರೆ ಹೆಡ್ (24) ಹಾಗೂ ಬೆನ್ (54) ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ನಂತರ ಬಂದ ಯಾವುದೇ ಆಟಗಾರರು ಹೆಚ್ಚು ಹೊತ್ತು ನಿಲ್ಲಲಿಲ್ಲ, ಹಾಡಿ೯ (6), ಟೀಮ್ ಡೇವಿಡ್ (17) , ಶಾಟ್೯(16) ಹಾಗೂ ನಾಯಕ ಮ್ಯಾಥ್ಯೂ ವೆಡ್ (22) ರನ್ ಗಳಿಸಿದ್ದರೂ ಅದು ಜಯ ಸಾಧಿಸಲು ಸಾಧ್ಯವಾಗಲಿಲ್ಲ.

ಭಾರತ ತಂಡದ ಪರವಾಗಿ ಮುಖೇಶ್ ಕುಮಾರ್ ಮೂರು, ಅಶ೯ದೀಪ್ ಸಿಂಗ್ ಹಾಗೂ ರವಿ ಬಿಷ್ಣೋಯಿ ಎರಡು ವಿಕೆಟ್ ಕಬಳಿಸಿದರೆ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು, ಅಲ್ ರೌಂಡರ್ ಆಟವಾಡಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ ಟೂರ್ನಿಯುದ್ದಕ್ಕೂ ಉತ್ತಮ ಬೌಲಿಂಗ್ ಪ್ರದರ್ಶನ ಮಾಡಿದ್ದ ರವಿ ಬಿಷ್ಣೋಯಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

16 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

21 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago