ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತ ತಂಡ 4-1 ಅಂತರದಿಂದ ಗೆಲುವು ಸಾಧಿಸುವ ಮೂಲಕ ಆಸೀಸ್ ಗೆ ಆಘಾತ ನೀಡಿದೆ.
ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿ ಸೋಲಿನ ಅಂತರವನ್ನು ಕಡಿಮೆ ಮಾಡುವ ಆಸೆ ಈಡೇರಲಿಲ್ಲ, ಆಸ್ಟ್ರೇಲಿಯಾದ ನಾಯಕ ಮ್ಯಾಥ್ಯೂ ವೆಡ್ ಐದು ಪಂದ್ಯಗಳಲ್ಲಿ ಟಾಸ್ ಗೆದ್ದರೂ ಮ್ಯಾಚ್ ಗೆದ್ದಿದ್ದು ಕೇವಲ ಒಂದು ಪಂದ್ಯದಲ್ಲಿ ಮಾತ್ರ.
ಆಸೀಸ್ ಅಂತಿಮ ಪಂದ್ಯದ ಟಾಸ್ ಗೆದ್ದರೂ ಬೌಲಿಂಗ್ ಆಯ್ದುಕೊಂಡ ಕಾರಣ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಈ ಬಾರಿ ಆರಂಭಿಕ ಆಘಾತ ಎದುರಿಸಿತು ಯಶಸ್ವಿ ಜೈಸ್ವಾಲ್ (21) ಹಾಗೂ ಋತುರಾಜ್ ಗಾಯಕ್ವಾಡ್ (10) ರನ್ ಗಳಿಸಿ ಔಟಾದರು.
ನಂತರ ಬಂದ ಶ್ರೇಯಸ್ ಅಯ್ಯರ್ (53) ತಂಡದ ಮೊತ್ತವನ್ನು ಹೆಚ್ಚಿಸಲು ಮುಂದಾದರು, ಆದರೆ ನಾಯಕ ಸೂರ್ಯ ಕುಮಾರ್ ಯಾದವ್ (5) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ರಿಂಕು ಸಿಂಗ್ (6) ನಿರಾಸೆ ಮೂಡಿಸಿದರು, ಆದರೆ ಜಿತೇಶ್ ಶರ್ಮಾ (24) ಹಾಗೂ ಅಕ್ಷರ್ ಪಟೇಲ್ (31) ತಂಡದ ಮೊತ್ತವನ್ನು 160 ರನ್ ಗಡಿ ದಾಟಿಸಿದರು.
ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಟಗಾರ ಫಿಲಿಪ್ಸ್ (4) ಮುಖೇಶ್ ಕುಮಾರ್ ಬೌಲಿಂಗ್ ನಲ್ಲಿ ಔಟಾದರು, ಆದರೆ ಹೆಡ್ (24) ಹಾಗೂ ಬೆನ್ (54) ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ನಂತರ ಬಂದ ಯಾವುದೇ ಆಟಗಾರರು ಹೆಚ್ಚು ಹೊತ್ತು ನಿಲ್ಲಲಿಲ್ಲ, ಹಾಡಿ೯ (6), ಟೀಮ್ ಡೇವಿಡ್ (17) , ಶಾಟ್೯(16) ಹಾಗೂ ನಾಯಕ ಮ್ಯಾಥ್ಯೂ ವೆಡ್ (22) ರನ್ ಗಳಿಸಿದ್ದರೂ ಅದು ಜಯ ಸಾಧಿಸಲು ಸಾಧ್ಯವಾಗಲಿಲ್ಲ.
ಭಾರತ ತಂಡದ ಪರವಾಗಿ ಮುಖೇಶ್ ಕುಮಾರ್ ಮೂರು, ಅಶ೯ದೀಪ್ ಸಿಂಗ್ ಹಾಗೂ ರವಿ ಬಿಷ್ಣೋಯಿ ಎರಡು ವಿಕೆಟ್ ಕಬಳಿಸಿದರೆ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು, ಅಲ್ ರೌಂಡರ್ ಆಟವಾಡಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ ಟೂರ್ನಿಯುದ್ದಕ್ಕೂ ಉತ್ತಮ ಬೌಲಿಂಗ್ ಪ್ರದರ್ಶನ ಮಾಡಿದ್ದ ರವಿ ಬಿಷ್ಣೋಯಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…