ಕೊನೆಯ ಪಂದ್ಯದಲ್ಲೂ ಮುಗ್ಗುರಿಸಿದ ಆಸೀಸ್, ಭಾರತಕ್ಕೆ 4-1 ಅಂತರದ ಜಯ !

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತ ತಂಡ 4-1 ಅಂತರದಿಂದ ಗೆಲುವು ಸಾಧಿಸುವ ಮೂಲಕ ಆಸೀಸ್ ಗೆ ಆಘಾತ ನೀಡಿದೆ.

ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿ ಸೋಲಿನ ಅಂತರವನ್ನು ಕಡಿಮೆ ಮಾಡುವ ಆಸೆ ಈಡೇರಲಿಲ್ಲ, ಆಸ್ಟ್ರೇಲಿಯಾದ ನಾಯಕ ಮ್ಯಾಥ್ಯೂ ವೆಡ್ ಐದು ಪಂದ್ಯಗಳಲ್ಲಿ ಟಾಸ್ ಗೆದ್ದರೂ ಮ್ಯಾಚ್ ಗೆದ್ದಿದ್ದು ಕೇವಲ ಒಂದು ಪಂದ್ಯದಲ್ಲಿ ಮಾತ್ರ.

ಆಸೀಸ್ ಅಂತಿಮ ಪಂದ್ಯದ ಟಾಸ್ ಗೆದ್ದರೂ ಬೌಲಿಂಗ್ ಆಯ್ದುಕೊಂಡ ಕಾರಣ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು, ಈ ಬಾರಿ ಆರಂಭಿಕ ಆಘಾತ ಎದುರಿಸಿತು ಯಶಸ್ವಿ ಜೈಸ್ವಾಲ್ (21) ಹಾಗೂ ಋತುರಾಜ್ ಗಾಯಕ್ವಾಡ್ (10) ರನ್ ಗಳಿಸಿ ಔಟಾದರು.

ನಂತರ ಬಂದ ಶ್ರೇಯಸ್ ಅಯ್ಯರ್ (53) ತಂಡದ ಮೊತ್ತವನ್ನು ಹೆಚ್ಚಿಸಲು ಮುಂದಾದರು, ಆದರೆ ನಾಯಕ ಸೂರ್ಯ ಕುಮಾರ್ ಯಾದವ್ (5) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ರಿಂಕು ಸಿಂಗ್ (6) ನಿರಾಸೆ ಮೂಡಿಸಿದರು, ಆದರೆ ಜಿತೇಶ್ ಶರ್ಮಾ (24) ಹಾಗೂ ಅಕ್ಷರ್ ಪಟೇಲ್ (31) ತಂಡದ ಮೊತ್ತವನ್ನು 160 ರನ್ ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಟಗಾರ ಫಿಲಿಪ್ಸ್ (4) ಮುಖೇಶ್ ಕುಮಾರ್ ಬೌಲಿಂಗ್ ನಲ್ಲಿ ಔಟಾದರು, ಆದರೆ ಹೆಡ್ (24) ಹಾಗೂ ಬೆನ್ (54) ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ನಂತರ ಬಂದ ಯಾವುದೇ ಆಟಗಾರರು ಹೆಚ್ಚು ಹೊತ್ತು ನಿಲ್ಲಲಿಲ್ಲ, ಹಾಡಿ೯ (6), ಟೀಮ್ ಡೇವಿಡ್ (17) , ಶಾಟ್೯(16) ಹಾಗೂ ನಾಯಕ ಮ್ಯಾಥ್ಯೂ ವೆಡ್ (22) ರನ್ ಗಳಿಸಿದ್ದರೂ ಅದು ಜಯ ಸಾಧಿಸಲು ಸಾಧ್ಯವಾಗಲಿಲ್ಲ.

ಭಾರತ ತಂಡದ ಪರವಾಗಿ ಮುಖೇಶ್ ಕುಮಾರ್ ಮೂರು, ಅಶ೯ದೀಪ್ ಸಿಂಗ್ ಹಾಗೂ ರವಿ ಬಿಷ್ಣೋಯಿ ಎರಡು ವಿಕೆಟ್ ಕಬಳಿಸಿದರೆ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು, ಅಲ್ ರೌಂಡರ್ ಆಟವಾಡಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ ಟೂರ್ನಿಯುದ್ದಕ್ಕೂ ಉತ್ತಮ ಬೌಲಿಂಗ್ ಪ್ರದರ್ಶನ ಮಾಡಿದ್ದ ರವಿ ಬಿಷ್ಣೋಯಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

1 hour ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago