ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ಆರೋಪ: ತನಿಖೆಗೆ ಆಯೋಗ ರಚನೆ- ಸಿಎಂ ಸಿದ್ದರಾಮಯ್ಯ

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ಅವರ ನೇತೃತ್ವದ ಆಯೋಗ ರಚಿಸಲಾಗಿದೆ, ವರದಿ ಇನ್ನೂ ಕೈ ಸೇರಿಲ್ಲ, ಪತ್ರಿಕೆಯಲ್ಲಿ ಓದಿದ್ದನ್ನು ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿ.ಎಂ.ಯಡಿಯೂರಪ್ಪ ಅವರು ಇದೆಲ್ಲ ಸುಳ್ಳು ಎಂದರೆ ವಾಸ್ತವಾಂಶ ಬದಲಾಗಲ್ಲ. ಈ ಬಗ್ಗೆ ನ್ಯಾಯಾಲಯವಿದೆ, ಅಲ್ಲಿ ಸತ್ಯಾಸತ್ಯತೆ ಬಯಲಾಗಲಿದೆ.‌
ಬಿಜೆಪಿಯವರು ಎಲ್ಲವನ್ನೂ ಸುಳ್ಳು ಅಂತಾರೆ. ಅವರು ಸುಳ್ಳಿನ ಪಿತಾಮಹರು. ಯಡಿಯೂರಪ್ಪ ಅವರು ಸಿ.ಎಂ.ಆಗಿದ್ದಾಗ ಕೋವಿಡ್ ಹಗರಣಗಳನ್ನು ನಾನು ವಿರೋಧಪಕ್ಷದ ನಾಯಕನಾಗಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೆ. ಆಗಲೂ ಸಾಕಷ್ಟು ಅಂಶಗಳನ್ನು ದಾಖಲೆ ಸಹಿತ ಮಾತನಾಡಿದ್ದೆ. ಈಗ ಆಯೋಗದ ವರದಿ ಬರಲಿ, ನಂತರ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಆಕ್ಸಿಜನ್ ಕೊರತೆಯಿಂದ ಜನರು ಮೃತಪಟ್ಟಿರುವ ದುರ್ಘಟನೆಗಳು ನಡೆದವು. ಇದನ್ನು ಸಚಿವರಾಗಿದ್ದ ಸುಧಾಕರ್ ಅವರು ಸುಳ್ಳು ಸುಳ್ಳು ಎಂದರು. ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ ಮೇಲೆ ಸರ್ಕಾರ ತನ್ನ ನಿರ್ಲಕ್ಷ್ಯ ಒಪ್ಪಿಕೊಂಡು, ಸಮಸ್ಯೆ ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಟ್ಟಿತು ಎಂದು ತಿಳಿಸಿದರು.

ಶೀಘ್ರದಲ್ಲೇ ಸಿ.ಎಂ ರಾಜೀನಾಮೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಚುನಾವಣಾ ಕಾರಣಕ್ಕೆ ಇಂತಹ ಹೇಳಿಕೆ ನೀಡುತ್ತಾರೆ. ನಾನು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳುವವನು.
ನಾನು ಸಣ್ಣ ತಪ್ಪೂ ಮಾಡಿಲ್ಲ, ಮಾಡೋದು ಇಲ್ಲ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.

ಯಡಿಯೂರಪ್ಪ ಅವರು 2 ಸಾವಿರ ಕೋಟಿ ಕೊಟ್ಟು ಮುಖ್ಯಮಂತ್ರಿ‌ ಆದ್ರು.‌ ಇವರ ಪುತ್ರ ವಿಜಯೇಂದ್ರ ಕೂಡ ದುಡ್ಡು ಕೊಟ್ಟೇ ಪಕ್ಷದ ಅಧ್ಯಕ್ಷ ಆಗಿದ್ದು ಅಂತ ಯತ್ನಾಳ್ ಅವರೇ ಹೇಳಿದ್ದಾರೆ. ಇವರಿಗೆ ಸಾವಿರ ಸಾವಿರ ಕೋಟಿ ಎಲ್ಲಿಂದ ಬಂತು? ಇದರ ಸತ್ಯಾಸತ್ಯತೆ ಕೂಡ ಬಯಲಾಗಬೇಕು ಎಂದು ಆಗ್ರಹಿಸಿದರು.

ಗೃಹಲಕ್ಷ್ಮಿಗೆ ಹಂಚಲು ಹಣ ಇಲ್ಲ ಎಂಬ ದೇವೇಗೌಡರ ಹೇಳಿಕೆ ಶುದ್ಧ ಸುಳ್ಳು. ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕುತ್ತೇವೆ ಎಂದರು.

ವಕ್ಫ್ ಆಸ್ತಿ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತನ್ನ ಪ್ರಣಾಳಿಕೆಯಲ್ಲೇ ಬಿಜೆಪಿ ಘೋಷಿಸಿದೆ. ಬಿಜೆಪಿ ಸರ್ಕಾರವೇ 216 ಮಂದಿಯನ್ನು ಒಕ್ಕಲೆಬ್ಬಿಸಲು ನೋಟಿಸ್ ನೀಡಿತ್ತು. ಈಗ ನೋಟಿಸ್ ನೀಡಿದವರೇ ಸುಳ್ಳು ಹೇಳಿಕೆ ನೀಡುತ್ತಾ, ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ. ಇದು ನಮ್ಮ‌ ಸ್ಪಷ್ಟ ತೀರ್ಮಾನ.‌ ನೋಟಿಸ್ ಗಳನ್ನು ಹಿಂಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದ್ದೇನೆ, ಚುನಾವಣೆ ಪ್ರಣಾಳಿಕೆಯಲ್ಲಿ ಅವರೇ ವಕ್ಫ್ ಆಸ್ತಿ ಒತ್ತುವರಿ ತೆರವು ಮಾಡುವುದಾಗಿ ಹೇಳಿ, ಈಗ ರಾಜಕೀಯಕ್ಕಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ..

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

43 minutes ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

5 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

22 hours ago