ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ಆರೋಪ: ತನಿಖೆಗೆ ಆಯೋಗ ರಚನೆ- ಸಿಎಂ ಸಿದ್ದರಾಮಯ್ಯ

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ಅವರ ನೇತೃತ್ವದ ಆಯೋಗ ರಚಿಸಲಾಗಿದೆ, ವರದಿ ಇನ್ನೂ ಕೈ ಸೇರಿಲ್ಲ, ಪತ್ರಿಕೆಯಲ್ಲಿ ಓದಿದ್ದನ್ನು ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿ.ಎಂ.ಯಡಿಯೂರಪ್ಪ ಅವರು ಇದೆಲ್ಲ ಸುಳ್ಳು ಎಂದರೆ ವಾಸ್ತವಾಂಶ ಬದಲಾಗಲ್ಲ. ಈ ಬಗ್ಗೆ ನ್ಯಾಯಾಲಯವಿದೆ, ಅಲ್ಲಿ ಸತ್ಯಾಸತ್ಯತೆ ಬಯಲಾಗಲಿದೆ.‌
ಬಿಜೆಪಿಯವರು ಎಲ್ಲವನ್ನೂ ಸುಳ್ಳು ಅಂತಾರೆ. ಅವರು ಸುಳ್ಳಿನ ಪಿತಾಮಹರು. ಯಡಿಯೂರಪ್ಪ ಅವರು ಸಿ.ಎಂ.ಆಗಿದ್ದಾಗ ಕೋವಿಡ್ ಹಗರಣಗಳನ್ನು ನಾನು ವಿರೋಧಪಕ್ಷದ ನಾಯಕನಾಗಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೆ. ಆಗಲೂ ಸಾಕಷ್ಟು ಅಂಶಗಳನ್ನು ದಾಖಲೆ ಸಹಿತ ಮಾತನಾಡಿದ್ದೆ. ಈಗ ಆಯೋಗದ ವರದಿ ಬರಲಿ, ನಂತರ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಆಕ್ಸಿಜನ್ ಕೊರತೆಯಿಂದ ಜನರು ಮೃತಪಟ್ಟಿರುವ ದುರ್ಘಟನೆಗಳು ನಡೆದವು. ಇದನ್ನು ಸಚಿವರಾಗಿದ್ದ ಸುಧಾಕರ್ ಅವರು ಸುಳ್ಳು ಸುಳ್ಳು ಎಂದರು. ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ ಮೇಲೆ ಸರ್ಕಾರ ತನ್ನ ನಿರ್ಲಕ್ಷ್ಯ ಒಪ್ಪಿಕೊಂಡು, ಸಮಸ್ಯೆ ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಟ್ಟಿತು ಎಂದು ತಿಳಿಸಿದರು.

ಶೀಘ್ರದಲ್ಲೇ ಸಿ.ಎಂ ರಾಜೀನಾಮೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಚುನಾವಣಾ ಕಾರಣಕ್ಕೆ ಇಂತಹ ಹೇಳಿಕೆ ನೀಡುತ್ತಾರೆ. ನಾನು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳುವವನು.
ನಾನು ಸಣ್ಣ ತಪ್ಪೂ ಮಾಡಿಲ್ಲ, ಮಾಡೋದು ಇಲ್ಲ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.

ಯಡಿಯೂರಪ್ಪ ಅವರು 2 ಸಾವಿರ ಕೋಟಿ ಕೊಟ್ಟು ಮುಖ್ಯಮಂತ್ರಿ‌ ಆದ್ರು.‌ ಇವರ ಪುತ್ರ ವಿಜಯೇಂದ್ರ ಕೂಡ ದುಡ್ಡು ಕೊಟ್ಟೇ ಪಕ್ಷದ ಅಧ್ಯಕ್ಷ ಆಗಿದ್ದು ಅಂತ ಯತ್ನಾಳ್ ಅವರೇ ಹೇಳಿದ್ದಾರೆ. ಇವರಿಗೆ ಸಾವಿರ ಸಾವಿರ ಕೋಟಿ ಎಲ್ಲಿಂದ ಬಂತು? ಇದರ ಸತ್ಯಾಸತ್ಯತೆ ಕೂಡ ಬಯಲಾಗಬೇಕು ಎಂದು ಆಗ್ರಹಿಸಿದರು.

ಗೃಹಲಕ್ಷ್ಮಿಗೆ ಹಂಚಲು ಹಣ ಇಲ್ಲ ಎಂಬ ದೇವೇಗೌಡರ ಹೇಳಿಕೆ ಶುದ್ಧ ಸುಳ್ಳು. ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕುತ್ತೇವೆ ಎಂದರು.

ವಕ್ಫ್ ಆಸ್ತಿ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತನ್ನ ಪ್ರಣಾಳಿಕೆಯಲ್ಲೇ ಬಿಜೆಪಿ ಘೋಷಿಸಿದೆ. ಬಿಜೆಪಿ ಸರ್ಕಾರವೇ 216 ಮಂದಿಯನ್ನು ಒಕ್ಕಲೆಬ್ಬಿಸಲು ನೋಟಿಸ್ ನೀಡಿತ್ತು. ಈಗ ನೋಟಿಸ್ ನೀಡಿದವರೇ ಸುಳ್ಳು ಹೇಳಿಕೆ ನೀಡುತ್ತಾ, ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ. ಇದು ನಮ್ಮ‌ ಸ್ಪಷ್ಟ ತೀರ್ಮಾನ.‌ ನೋಟಿಸ್ ಗಳನ್ನು ಹಿಂಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದ್ದೇನೆ, ಚುನಾವಣೆ ಪ್ರಣಾಳಿಕೆಯಲ್ಲಿ ಅವರೇ ವಕ್ಫ್ ಆಸ್ತಿ ಒತ್ತುವರಿ ತೆರವು ಮಾಡುವುದಾಗಿ ಹೇಳಿ, ಈಗ ರಾಜಕೀಯಕ್ಕಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ..

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

34 minutes ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

3 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

14 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

14 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

15 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

16 hours ago