ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ಆರೋಪ: ತನಿಖೆಗೆ ಆಯೋಗ ರಚನೆ- ಸಿಎಂ ಸಿದ್ದರಾಮಯ್ಯ

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ಅವರ ನೇತೃತ್ವದ ಆಯೋಗ ರಚಿಸಲಾಗಿದೆ, ವರದಿ ಇನ್ನೂ ಕೈ ಸೇರಿಲ್ಲ, ಪತ್ರಿಕೆಯಲ್ಲಿ ಓದಿದ್ದನ್ನು ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿ.ಎಂ.ಯಡಿಯೂರಪ್ಪ ಅವರು ಇದೆಲ್ಲ ಸುಳ್ಳು ಎಂದರೆ ವಾಸ್ತವಾಂಶ ಬದಲಾಗಲ್ಲ. ಈ ಬಗ್ಗೆ ನ್ಯಾಯಾಲಯವಿದೆ, ಅಲ್ಲಿ ಸತ್ಯಾಸತ್ಯತೆ ಬಯಲಾಗಲಿದೆ.‌
ಬಿಜೆಪಿಯವರು ಎಲ್ಲವನ್ನೂ ಸುಳ್ಳು ಅಂತಾರೆ. ಅವರು ಸುಳ್ಳಿನ ಪಿತಾಮಹರು. ಯಡಿಯೂರಪ್ಪ ಅವರು ಸಿ.ಎಂ.ಆಗಿದ್ದಾಗ ಕೋವಿಡ್ ಹಗರಣಗಳನ್ನು ನಾನು ವಿರೋಧಪಕ್ಷದ ನಾಯಕನಾಗಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೆ. ಆಗಲೂ ಸಾಕಷ್ಟು ಅಂಶಗಳನ್ನು ದಾಖಲೆ ಸಹಿತ ಮಾತನಾಡಿದ್ದೆ. ಈಗ ಆಯೋಗದ ವರದಿ ಬರಲಿ, ನಂತರ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಆಕ್ಸಿಜನ್ ಕೊರತೆಯಿಂದ ಜನರು ಮೃತಪಟ್ಟಿರುವ ದುರ್ಘಟನೆಗಳು ನಡೆದವು. ಇದನ್ನು ಸಚಿವರಾಗಿದ್ದ ಸುಧಾಕರ್ ಅವರು ಸುಳ್ಳು ಸುಳ್ಳು ಎಂದರು. ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ ಮೇಲೆ ಸರ್ಕಾರ ತನ್ನ ನಿರ್ಲಕ್ಷ್ಯ ಒಪ್ಪಿಕೊಂಡು, ಸಮಸ್ಯೆ ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಟ್ಟಿತು ಎಂದು ತಿಳಿಸಿದರು.

ಶೀಘ್ರದಲ್ಲೇ ಸಿ.ಎಂ ರಾಜೀನಾಮೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಚುನಾವಣಾ ಕಾರಣಕ್ಕೆ ಇಂತಹ ಹೇಳಿಕೆ ನೀಡುತ್ತಾರೆ. ನಾನು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳುವವನು.
ನಾನು ಸಣ್ಣ ತಪ್ಪೂ ಮಾಡಿಲ್ಲ, ಮಾಡೋದು ಇಲ್ಲ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.

ಯಡಿಯೂರಪ್ಪ ಅವರು 2 ಸಾವಿರ ಕೋಟಿ ಕೊಟ್ಟು ಮುಖ್ಯಮಂತ್ರಿ‌ ಆದ್ರು.‌ ಇವರ ಪುತ್ರ ವಿಜಯೇಂದ್ರ ಕೂಡ ದುಡ್ಡು ಕೊಟ್ಟೇ ಪಕ್ಷದ ಅಧ್ಯಕ್ಷ ಆಗಿದ್ದು ಅಂತ ಯತ್ನಾಳ್ ಅವರೇ ಹೇಳಿದ್ದಾರೆ. ಇವರಿಗೆ ಸಾವಿರ ಸಾವಿರ ಕೋಟಿ ಎಲ್ಲಿಂದ ಬಂತು? ಇದರ ಸತ್ಯಾಸತ್ಯತೆ ಕೂಡ ಬಯಲಾಗಬೇಕು ಎಂದು ಆಗ್ರಹಿಸಿದರು.

ಗೃಹಲಕ್ಷ್ಮಿಗೆ ಹಂಚಲು ಹಣ ಇಲ್ಲ ಎಂಬ ದೇವೇಗೌಡರ ಹೇಳಿಕೆ ಶುದ್ಧ ಸುಳ್ಳು. ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕುತ್ತೇವೆ ಎಂದರು.

ವಕ್ಫ್ ಆಸ್ತಿ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತನ್ನ ಪ್ರಣಾಳಿಕೆಯಲ್ಲೇ ಬಿಜೆಪಿ ಘೋಷಿಸಿದೆ. ಬಿಜೆಪಿ ಸರ್ಕಾರವೇ 216 ಮಂದಿಯನ್ನು ಒಕ್ಕಲೆಬ್ಬಿಸಲು ನೋಟಿಸ್ ನೀಡಿತ್ತು. ಈಗ ನೋಟಿಸ್ ನೀಡಿದವರೇ ಸುಳ್ಳು ಹೇಳಿಕೆ ನೀಡುತ್ತಾ, ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ. ಇದು ನಮ್ಮ‌ ಸ್ಪಷ್ಟ ತೀರ್ಮಾನ.‌ ನೋಟಿಸ್ ಗಳನ್ನು ಹಿಂಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದ್ದೇನೆ, ಚುನಾವಣೆ ಪ್ರಣಾಳಿಕೆಯಲ್ಲಿ ಅವರೇ ವಕ್ಫ್ ಆಸ್ತಿ ಒತ್ತುವರಿ ತೆರವು ಮಾಡುವುದಾಗಿ ಹೇಳಿ, ಈಗ ರಾಜಕೀಯಕ್ಕಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ..

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

12 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

13 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

14 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

14 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

18 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

20 hours ago