ಕೊರೊನಾ ಉಲ್ಬಣ ವಿಚಾರ- ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು-ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗದಂತೆ ಆಸ್ಪತ್ರೆಗಳು ಸಜ್ಜಾಗಬೇಕು- ಸಿಎಂ ಸಿದ್ದರಾಮಯ್ಯ ಸೂಚನೆ

ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು. ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ  7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ ಎಂದು ಸಿಎಂ‌ ಸಿದ್ದರಾಮಯ್ಯ ಮಾಹಿತಿ ನೀಡಿದರು.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಉನ್ನತ ಮಟ್ಟದ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ ಎಂದರು.

ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ಹೇಳಿದರು.

ಕೊವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

1 hour ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

2 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

14 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago