ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು. ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಉನ್ನತ ಮಟ್ಟದ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ ಎಂದರು.
ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ಹೇಳಿದರು.
ಕೊವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದು ತಿಳಿಸಿದರು.
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…