ಕೊರೊನಾ ಉಲ್ಬಣ ವಿಚಾರ- ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು-ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗದಂತೆ ಆಸ್ಪತ್ರೆಗಳು ಸಜ್ಜಾಗಬೇಕು- ಸಿಎಂ ಸಿದ್ದರಾಮಯ್ಯ ಸೂಚನೆ

ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು. ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ  7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ ಎಂದು ಸಿಎಂ‌ ಸಿದ್ದರಾಮಯ್ಯ ಮಾಹಿತಿ ನೀಡಿದರು.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಉನ್ನತ ಮಟ್ಟದ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ ಎಂದರು.

ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ಹೇಳಿದರು.

ಕೊವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

6 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

11 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago