ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು. ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಉನ್ನತ ಮಟ್ಟದ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ ಎಂದರು.
ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ಹೇಳಿದರು.
ಕೊವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದು ತಿಳಿಸಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…