ಕೊರೊನಾ ಉಲ್ಬಣ ವಿಚಾರ- ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು-ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗದಂತೆ ಆಸ್ಪತ್ರೆಗಳು ಸಜ್ಜಾಗಬೇಕು- ಸಿಎಂ ಸಿದ್ದರಾಮಯ್ಯ ಸೂಚನೆ

ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು. ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ  7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ ಎಂದು ಸಿಎಂ‌ ಸಿದ್ದರಾಮಯ್ಯ ಮಾಹಿತಿ ನೀಡಿದರು.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಉನ್ನತ ಮಟ್ಟದ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ ಎಂದರು.

ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ಹೇಳಿದರು.

ಕೊವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

5 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

5 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

9 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

21 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago