ಆತ ಎರಡು ಮದುವೆ ಆಗಿದ್ದನಂತೆ. ಆದರೆ ಸಂಸಾರದಲ್ಲಿ ಸಮಸ್ಯೆ ಇದೆ ಎಂದು ಮೂರನೇ ಹೆಣ್ಣಿನ ಜೊತೆಯಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತೆ. ಆದರೆ ಆಕೆ ಈತನಿಂದ ಹಣ, ಒಡವೆ ಎಲ್ಲಾ ತೆಗೆದುಕೊಂಡು, ಕೊನೆಗೆ ಹಣ, ಒಡವೆ ಕೊಡಲ್ಲ ಎಂದು ಬೆದರಿಕೆ ಹಾಕಿದ್ದಳಂತೆ. ಅದಕ್ಕೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯನ್ನ ಕೊಂದು, ಎರಡು ದಿನದ ನಂತರ ಆತನೂ ನೇಣಿಗೆ ಶರಣಾಗಿದ್ದಾನೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ………
ಇನ್ನೂ ಕೊಲೆ ಆರೋಪಿ ವೀರಭದ್ರಯ್ಯ ಮತ್ತು ಕೊಲೆಯಾದ ದ್ರಾಕ್ಷಾಯಣಿಗೆ ಅಕ್ರಮ ಸಂಬಂಧ ಇತ್ತಂತೆ. ವೀರಭದ್ರಯ್ಯ ನಿಗೆ ಈ ಮೊದಲೇ ಎರಡು ಮದುವೆ ಆಗಿತ್ತು. ಆದರೂ ಇಳಿ ವಯಸ್ಸಿನಲ್ಲಿ ಮೂರನೇ ಹೆಣ್ಣಿನ ಸಹವಾಸ ಮಾಡಿದ್ದ. ಈಕೆಗಾಗಿ ಲಕ್ಷಾಂತರ ರುಪಾಯಿ ಹಣವನ್ನು ಸಹ ನೀಡಿದ್ದ. ಜೊತೆಗೆ ಒಡವೆಗಳನ್ನೂ ಸಹ ಕೊಡಿಸಿದ್ದನಂತೆ. ಆದರೆ ಮಹಿಳೆಗೆ ಬೇರೊಬ್ಬ ವ್ಯಕ್ತಿಯ ಜೊತೆಯಲ್ಲಿ ಅಕ್ರಮ ಸಂಭಂದ ಇದೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಹಣ ಮತ್ತು ಒಡವೆ ವಾಪಸ್ ಕೇಳಿದ್ದಾನೆ. ಆದರೆ ಆಕೆ ಈತನಿಗೆ ಕೊಲೆ ಬೆದರಿಕೆ ಹಾಕಿದ್ದಳಂತೆ.
ಕೊನೆ ಕೊನೆಯಲ್ಲಿ ಇಬ್ಬರ ನಡುವೆ ಮನಸ್ಥಾಪ ಹೆಚ್ಚಾಗಿ ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಆದರೆ ರಾತ್ರಿ 11 ಗಂಟೆಯ ನಂತರ ನೇಣಿಗೆ ಶರಣಾಗಿದ್ದಾನೆ. ಸ್ಥಳೀಯರು ಯಾರೋ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.ದೊಡ್ಡಬಳ್ಳಾಪುರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಒಟ್ಟಾರೆ ಇಳಿ ವಯಸ್ಸಿನಲ್ಲಿ ಅಕ್ರಮ ಸಂಬಂಧದ ಮೋಹಕ್ಕೆ ಸಿಲುಕಿ ಈಗ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಮೃತ ದೇಹವನ್ನು ಪೋಲೀಸರು ಕುಟುಂಬಸ್ಥರಿಗೆ ನೀಡಿ ತನಿಖೆ ಮುಂದುವರಿಸಿದ್ದಾರೆ.
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…