ಕೊಲೆ‌ ಆರೋಪಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು

ಆತ ಎರಡು ಮದುವೆ ಆಗಿದ್ದನಂತೆ. ಆದರೆ ಸಂಸಾರದಲ್ಲಿ ಸಮಸ್ಯೆ ಇದೆ ಎಂದು ಮೂರನೇ ಹೆಣ್ಣಿನ ಜೊತೆಯಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತೆ. ಆದರೆ ಆಕೆ ಈತನಿಂದ ಹಣ, ಒಡವೆ ಎಲ್ಲಾ ತೆಗೆದುಕೊಂಡು, ಕೊನೆಗೆ ಹಣ, ಒಡವೆ ಕೊಡಲ್ಲ ಎಂದು ಬೆದರಿಕೆ ಹಾಕಿದ್ದಳಂತೆ.‌ ಅದಕ್ಕೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯನ್ನ ಕೊಂದು, ಎರಡು ದಿನದ ನಂತರ ಆತನೂ ನೇಣಿಗೆ ಶರಣಾಗಿದ್ದಾನೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ………

ಹೌದು ಹೀಗೆ ಮರಕ್ಕೆ ನೇಣು ಬಿಗಿದುಕೊಂಡಿರುವ ವ್ಯಕ್ತಿ, ಸ್ಥಳ‌ ಪರಿಶೀಲನೆ ಮಾಡುತ್ತಿರುವ ಪೋಲೀಸರು, ಶವಾಗರದ ಮುಂದೆ ಕಾದು ಕುಳಿತಿರುವ ಕುಟುಂಬಸ್ಥರು, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ‌ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕೊಳೂರು ಗ್ರಾಮದಲ್ಲಿ. ಹೌದು ರಾತ್ರಿ ವೀರಭದ್ರಯ್ಯ (63) ಎಂಬ ವ್ಯಕ್ತಿ ಮರಕ್ಕೆ‌ ನೇಣಿಗೆ ಶರಣಾಗಿದ್ದಾನೆ. ಈತ ಇದೇ ತಿಂಗಳ 12 ರಂದು ನೆಲಮಂಗಲದ ದ್ರಾಕ್ಷಾಯಿಣಿ ಎಂಬ ಮಹಿಳೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಆರೋಪಿಯನ್ನ ಪತ್ತೆ ಹಚ್ಚಲು ಪೋಲೀಸರು ಬಲೆ ಬೀಸಿದ್ದರು. ಆದರೆ ಕೊಲೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನೂ ಕೊಲೆ ಆರೋಪಿ ವೀರಭದ್ರಯ್ಯ ಮತ್ತು ಕೊಲೆಯಾದ ದ್ರಾಕ್ಷಾಯಣಿಗೆ ಅಕ್ರಮ ಸಂಬಂಧ ಇತ್ತಂತೆ. ವೀರಭದ್ರಯ್ಯ ನಿಗೆ ಈ ಮೊದಲೇ ಎರಡು ಮದುವೆ ಆಗಿತ್ತು. ಆದರೂ ಇಳಿ ವಯಸ್ಸಿನಲ್ಲಿ ಮೂರನೇ ಹೆಣ್ಣಿನ ಸಹವಾಸ ಮಾಡಿದ್ದ. ಈಕೆಗಾಗಿ ಲಕ್ಷಾಂತರ ರುಪಾಯಿ ಹಣವನ್ನು ಸಹ ನೀಡಿದ್ದ. ಜೊತೆಗೆ ಒಡವೆಗಳನ್ನೂ ಸಹ ಕೊಡಿಸಿದ್ದನಂತೆ. ಆದರೆ ಮಹಿಳೆಗೆ ಬೇರೊಬ್ಬ ವ್ಯಕ್ತಿಯ ಜೊತೆಯಲ್ಲಿ ಅಕ್ರಮ ಸಂಭಂದ ಇದೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಹಣ ಮತ್ತು ಒಡವೆ ವಾಪಸ್ ಕೇಳಿದ್ದಾನೆ. ಆದರೆ ಆಕೆ ಈತನಿಗೆ ಕೊಲೆ ಬೆದರಿಕೆ ಹಾಕಿದ್ದಳಂತೆ.

ಕೊನೆ ಕೊನೆಯಲ್ಲಿ ಇಬ್ಬರ ನಡುವೆ ಮನಸ್ಥಾಪ ಹೆಚ್ಚಾಗಿ ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಆದರೆ ರಾತ್ರಿ 11 ಗಂಟೆಯ ನಂತರ ನೇಣಿಗೆ ಶರಣಾಗಿದ್ದಾನೆ‌.‌ ಸ್ಥಳೀಯರು ಯಾರೋ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.‌ದೊಡ್ಡಬಳ್ಳಾಪುರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಾರೆ ಇಳಿ ವಯಸ್ಸಿನಲ್ಲಿ ಅಕ್ರಮ ಸಂಬಂಧದ ಮೋಹಕ್ಕೆ ಸಿಲುಕಿ ಈಗ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಮೃತ ದೇಹವನ್ನು ಪೋಲೀಸರು ಕುಟುಂಬಸ್ಥರಿಗೆ ನೀಡಿ ತನಿಖೆ ಮುಂದುವರಿಸಿದ್ದಾರೆ.

 

Ramesh Babu

Journalist

Recent Posts

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

1 hour ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

2 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

13 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

22 hours ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago

ತಮಿಳುನಾಡಿನ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಿಸಿ ಹೆಣ್ಮಕ್ಕಳ ಕಣ್ಮಣಿಯಾಗಲು ಹೊರಟ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್

ನಟಿ ತ್ರಿಷಾ ಜತೆ ಅಫೇರ್‌ ಆರೋಪ, ಹೆಂಡ್ತಿ ಡಿವೋರ್ಸ್‌ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್‌ ಮೀಡಿಯಾದಲ್ಲಿ…

1 day ago