ಆತ ಎರಡು ಮದುವೆ ಆಗಿದ್ದನಂತೆ. ಆದರೆ ಸಂಸಾರದಲ್ಲಿ ಸಮಸ್ಯೆ ಇದೆ ಎಂದು ಮೂರನೇ ಹೆಣ್ಣಿನ ಜೊತೆಯಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತೆ. ಆದರೆ ಆಕೆ ಈತನಿಂದ ಹಣ, ಒಡವೆ ಎಲ್ಲಾ ತೆಗೆದುಕೊಂಡು, ಕೊನೆಗೆ ಹಣ, ಒಡವೆ ಕೊಡಲ್ಲ ಎಂದು ಬೆದರಿಕೆ ಹಾಕಿದ್ದಳಂತೆ. ಅದಕ್ಕೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯನ್ನ ಕೊಂದು, ಎರಡು ದಿನದ ನಂತರ ಆತನೂ ನೇಣಿಗೆ ಶರಣಾಗಿದ್ದಾನೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ………
ಇನ್ನೂ ಕೊಲೆ ಆರೋಪಿ ವೀರಭದ್ರಯ್ಯ ಮತ್ತು ಕೊಲೆಯಾದ ದ್ರಾಕ್ಷಾಯಣಿಗೆ ಅಕ್ರಮ ಸಂಬಂಧ ಇತ್ತಂತೆ. ವೀರಭದ್ರಯ್ಯ ನಿಗೆ ಈ ಮೊದಲೇ ಎರಡು ಮದುವೆ ಆಗಿತ್ತು. ಆದರೂ ಇಳಿ ವಯಸ್ಸಿನಲ್ಲಿ ಮೂರನೇ ಹೆಣ್ಣಿನ ಸಹವಾಸ ಮಾಡಿದ್ದ. ಈಕೆಗಾಗಿ ಲಕ್ಷಾಂತರ ರುಪಾಯಿ ಹಣವನ್ನು ಸಹ ನೀಡಿದ್ದ. ಜೊತೆಗೆ ಒಡವೆಗಳನ್ನೂ ಸಹ ಕೊಡಿಸಿದ್ದನಂತೆ. ಆದರೆ ಮಹಿಳೆಗೆ ಬೇರೊಬ್ಬ ವ್ಯಕ್ತಿಯ ಜೊತೆಯಲ್ಲಿ ಅಕ್ರಮ ಸಂಭಂದ ಇದೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಹಣ ಮತ್ತು ಒಡವೆ ವಾಪಸ್ ಕೇಳಿದ್ದಾನೆ. ಆದರೆ ಆಕೆ ಈತನಿಗೆ ಕೊಲೆ ಬೆದರಿಕೆ ಹಾಕಿದ್ದಳಂತೆ.
ಕೊನೆ ಕೊನೆಯಲ್ಲಿ ಇಬ್ಬರ ನಡುವೆ ಮನಸ್ಥಾಪ ಹೆಚ್ಚಾಗಿ ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಆದರೆ ರಾತ್ರಿ 11 ಗಂಟೆಯ ನಂತರ ನೇಣಿಗೆ ಶರಣಾಗಿದ್ದಾನೆ. ಸ್ಥಳೀಯರು ಯಾರೋ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.ದೊಡ್ಡಬಳ್ಳಾಪುರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಒಟ್ಟಾರೆ ಇಳಿ ವಯಸ್ಸಿನಲ್ಲಿ ಅಕ್ರಮ ಸಂಬಂಧದ ಮೋಹಕ್ಕೆ ಸಿಲುಕಿ ಈಗ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಮೃತ ದೇಹವನ್ನು ಪೋಲೀಸರು ಕುಟುಂಬಸ್ಥರಿಗೆ ನೀಡಿ ತನಿಖೆ ಮುಂದುವರಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…