ಕೊಲೆ‌ ಆರೋಪಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು

ಆತ ಎರಡು ಮದುವೆ ಆಗಿದ್ದನಂತೆ. ಆದರೆ ಸಂಸಾರದಲ್ಲಿ ಸಮಸ್ಯೆ ಇದೆ ಎಂದು ಮೂರನೇ ಹೆಣ್ಣಿನ ಜೊತೆಯಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತೆ. ಆದರೆ ಆಕೆ ಈತನಿಂದ ಹಣ, ಒಡವೆ ಎಲ್ಲಾ ತೆಗೆದುಕೊಂಡು, ಕೊನೆಗೆ ಹಣ, ಒಡವೆ ಕೊಡಲ್ಲ ಎಂದು ಬೆದರಿಕೆ ಹಾಕಿದ್ದಳಂತೆ.‌ ಅದಕ್ಕೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯನ್ನ ಕೊಂದು, ಎರಡು ದಿನದ ನಂತರ ಆತನೂ ನೇಣಿಗೆ ಶರಣಾಗಿದ್ದಾನೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ………

ಹೌದು ಹೀಗೆ ಮರಕ್ಕೆ ನೇಣು ಬಿಗಿದುಕೊಂಡಿರುವ ವ್ಯಕ್ತಿ, ಸ್ಥಳ‌ ಪರಿಶೀಲನೆ ಮಾಡುತ್ತಿರುವ ಪೋಲೀಸರು, ಶವಾಗರದ ಮುಂದೆ ಕಾದು ಕುಳಿತಿರುವ ಕುಟುಂಬಸ್ಥರು, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ‌ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕೊಳೂರು ಗ್ರಾಮದಲ್ಲಿ. ಹೌದು ರಾತ್ರಿ ವೀರಭದ್ರಯ್ಯ (63) ಎಂಬ ವ್ಯಕ್ತಿ ಮರಕ್ಕೆ‌ ನೇಣಿಗೆ ಶರಣಾಗಿದ್ದಾನೆ. ಈತ ಇದೇ ತಿಂಗಳ 12 ರಂದು ನೆಲಮಂಗಲದ ದ್ರಾಕ್ಷಾಯಿಣಿ ಎಂಬ ಮಹಿಳೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಆರೋಪಿಯನ್ನ ಪತ್ತೆ ಹಚ್ಚಲು ಪೋಲೀಸರು ಬಲೆ ಬೀಸಿದ್ದರು. ಆದರೆ ಕೊಲೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನೂ ಕೊಲೆ ಆರೋಪಿ ವೀರಭದ್ರಯ್ಯ ಮತ್ತು ಕೊಲೆಯಾದ ದ್ರಾಕ್ಷಾಯಣಿಗೆ ಅಕ್ರಮ ಸಂಬಂಧ ಇತ್ತಂತೆ. ವೀರಭದ್ರಯ್ಯ ನಿಗೆ ಈ ಮೊದಲೇ ಎರಡು ಮದುವೆ ಆಗಿತ್ತು. ಆದರೂ ಇಳಿ ವಯಸ್ಸಿನಲ್ಲಿ ಮೂರನೇ ಹೆಣ್ಣಿನ ಸಹವಾಸ ಮಾಡಿದ್ದ. ಈಕೆಗಾಗಿ ಲಕ್ಷಾಂತರ ರುಪಾಯಿ ಹಣವನ್ನು ಸಹ ನೀಡಿದ್ದ. ಜೊತೆಗೆ ಒಡವೆಗಳನ್ನೂ ಸಹ ಕೊಡಿಸಿದ್ದನಂತೆ. ಆದರೆ ಮಹಿಳೆಗೆ ಬೇರೊಬ್ಬ ವ್ಯಕ್ತಿಯ ಜೊತೆಯಲ್ಲಿ ಅಕ್ರಮ ಸಂಭಂದ ಇದೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಹಣ ಮತ್ತು ಒಡವೆ ವಾಪಸ್ ಕೇಳಿದ್ದಾನೆ. ಆದರೆ ಆಕೆ ಈತನಿಗೆ ಕೊಲೆ ಬೆದರಿಕೆ ಹಾಕಿದ್ದಳಂತೆ.

ಕೊನೆ ಕೊನೆಯಲ್ಲಿ ಇಬ್ಬರ ನಡುವೆ ಮನಸ್ಥಾಪ ಹೆಚ್ಚಾಗಿ ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಆದರೆ ರಾತ್ರಿ 11 ಗಂಟೆಯ ನಂತರ ನೇಣಿಗೆ ಶರಣಾಗಿದ್ದಾನೆ‌.‌ ಸ್ಥಳೀಯರು ಯಾರೋ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.‌ದೊಡ್ಡಬಳ್ಳಾಪುರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಾರೆ ಇಳಿ ವಯಸ್ಸಿನಲ್ಲಿ ಅಕ್ರಮ ಸಂಬಂಧದ ಮೋಹಕ್ಕೆ ಸಿಲುಕಿ ಈಗ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಮೃತ ದೇಹವನ್ನು ಪೋಲೀಸರು ಕುಟುಂಬಸ್ಥರಿಗೆ ನೀಡಿ ತನಿಖೆ ಮುಂದುವರಿಸಿದ್ದಾರೆ.

 

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago