ಆತ ಎರಡು ಮದುವೆ ಆಗಿದ್ದನಂತೆ. ಆದರೆ ಸಂಸಾರದಲ್ಲಿ ಸಮಸ್ಯೆ ಇದೆ ಎಂದು ಮೂರನೇ ಹೆಣ್ಣಿನ ಜೊತೆಯಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತೆ. ಆದರೆ ಆಕೆ ಈತನಿಂದ ಹಣ, ಒಡವೆ ಎಲ್ಲಾ ತೆಗೆದುಕೊಂಡು, ಕೊನೆಗೆ ಹಣ, ಒಡವೆ ಕೊಡಲ್ಲ ಎಂದು ಬೆದರಿಕೆ ಹಾಕಿದ್ದಳಂತೆ. ಅದಕ್ಕೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯನ್ನ ಕೊಂದು, ಎರಡು ದಿನದ ನಂತರ ಆತನೂ ನೇಣಿಗೆ ಶರಣಾಗಿದ್ದಾನೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ………
ಇನ್ನೂ ಕೊಲೆ ಆರೋಪಿ ವೀರಭದ್ರಯ್ಯ ಮತ್ತು ಕೊಲೆಯಾದ ದ್ರಾಕ್ಷಾಯಣಿಗೆ ಅಕ್ರಮ ಸಂಬಂಧ ಇತ್ತಂತೆ. ವೀರಭದ್ರಯ್ಯ ನಿಗೆ ಈ ಮೊದಲೇ ಎರಡು ಮದುವೆ ಆಗಿತ್ತು. ಆದರೂ ಇಳಿ ವಯಸ್ಸಿನಲ್ಲಿ ಮೂರನೇ ಹೆಣ್ಣಿನ ಸಹವಾಸ ಮಾಡಿದ್ದ. ಈಕೆಗಾಗಿ ಲಕ್ಷಾಂತರ ರುಪಾಯಿ ಹಣವನ್ನು ಸಹ ನೀಡಿದ್ದ. ಜೊತೆಗೆ ಒಡವೆಗಳನ್ನೂ ಸಹ ಕೊಡಿಸಿದ್ದನಂತೆ. ಆದರೆ ಮಹಿಳೆಗೆ ಬೇರೊಬ್ಬ ವ್ಯಕ್ತಿಯ ಜೊತೆಯಲ್ಲಿ ಅಕ್ರಮ ಸಂಭಂದ ಇದೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಹಣ ಮತ್ತು ಒಡವೆ ವಾಪಸ್ ಕೇಳಿದ್ದಾನೆ. ಆದರೆ ಆಕೆ ಈತನಿಗೆ ಕೊಲೆ ಬೆದರಿಕೆ ಹಾಕಿದ್ದಳಂತೆ.
ಕೊನೆ ಕೊನೆಯಲ್ಲಿ ಇಬ್ಬರ ನಡುವೆ ಮನಸ್ಥಾಪ ಹೆಚ್ಚಾಗಿ ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಆದರೆ ರಾತ್ರಿ 11 ಗಂಟೆಯ ನಂತರ ನೇಣಿಗೆ ಶರಣಾಗಿದ್ದಾನೆ. ಸ್ಥಳೀಯರು ಯಾರೋ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.ದೊಡ್ಡಬಳ್ಳಾಪುರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಒಟ್ಟಾರೆ ಇಳಿ ವಯಸ್ಸಿನಲ್ಲಿ ಅಕ್ರಮ ಸಂಬಂಧದ ಮೋಹಕ್ಕೆ ಸಿಲುಕಿ ಈಗ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಮೃತ ದೇಹವನ್ನು ಪೋಲೀಸರು ಕುಟುಂಬಸ್ಥರಿಗೆ ನೀಡಿ ತನಿಖೆ ಮುಂದುವರಿಸಿದ್ದಾರೆ.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…