ಕೊಲೆ‌ ಆರೋಪಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು

ಆತ ಎರಡು ಮದುವೆ ಆಗಿದ್ದನಂತೆ. ಆದರೆ ಸಂಸಾರದಲ್ಲಿ ಸಮಸ್ಯೆ ಇದೆ ಎಂದು ಮೂರನೇ ಹೆಣ್ಣಿನ ಜೊತೆಯಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತೆ. ಆದರೆ ಆಕೆ ಈತನಿಂದ ಹಣ, ಒಡವೆ ಎಲ್ಲಾ ತೆಗೆದುಕೊಂಡು, ಕೊನೆಗೆ ಹಣ, ಒಡವೆ ಕೊಡಲ್ಲ ಎಂದು ಬೆದರಿಕೆ ಹಾಕಿದ್ದಳಂತೆ.‌ ಅದಕ್ಕೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯನ್ನ ಕೊಂದು, ಎರಡು ದಿನದ ನಂತರ ಆತನೂ ನೇಣಿಗೆ ಶರಣಾಗಿದ್ದಾನೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ………

ಹೌದು ಹೀಗೆ ಮರಕ್ಕೆ ನೇಣು ಬಿಗಿದುಕೊಂಡಿರುವ ವ್ಯಕ್ತಿ, ಸ್ಥಳ‌ ಪರಿಶೀಲನೆ ಮಾಡುತ್ತಿರುವ ಪೋಲೀಸರು, ಶವಾಗರದ ಮುಂದೆ ಕಾದು ಕುಳಿತಿರುವ ಕುಟುಂಬಸ್ಥರು, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ‌ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕೊಳೂರು ಗ್ರಾಮದಲ್ಲಿ. ಹೌದು ರಾತ್ರಿ ವೀರಭದ್ರಯ್ಯ (63) ಎಂಬ ವ್ಯಕ್ತಿ ಮರಕ್ಕೆ‌ ನೇಣಿಗೆ ಶರಣಾಗಿದ್ದಾನೆ. ಈತ ಇದೇ ತಿಂಗಳ 12 ರಂದು ನೆಲಮಂಗಲದ ದ್ರಾಕ್ಷಾಯಿಣಿ ಎಂಬ ಮಹಿಳೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಆರೋಪಿಯನ್ನ ಪತ್ತೆ ಹಚ್ಚಲು ಪೋಲೀಸರು ಬಲೆ ಬೀಸಿದ್ದರು. ಆದರೆ ಕೊಲೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನೂ ಕೊಲೆ ಆರೋಪಿ ವೀರಭದ್ರಯ್ಯ ಮತ್ತು ಕೊಲೆಯಾದ ದ್ರಾಕ್ಷಾಯಣಿಗೆ ಅಕ್ರಮ ಸಂಬಂಧ ಇತ್ತಂತೆ. ವೀರಭದ್ರಯ್ಯ ನಿಗೆ ಈ ಮೊದಲೇ ಎರಡು ಮದುವೆ ಆಗಿತ್ತು. ಆದರೂ ಇಳಿ ವಯಸ್ಸಿನಲ್ಲಿ ಮೂರನೇ ಹೆಣ್ಣಿನ ಸಹವಾಸ ಮಾಡಿದ್ದ. ಈಕೆಗಾಗಿ ಲಕ್ಷಾಂತರ ರುಪಾಯಿ ಹಣವನ್ನು ಸಹ ನೀಡಿದ್ದ. ಜೊತೆಗೆ ಒಡವೆಗಳನ್ನೂ ಸಹ ಕೊಡಿಸಿದ್ದನಂತೆ. ಆದರೆ ಮಹಿಳೆಗೆ ಬೇರೊಬ್ಬ ವ್ಯಕ್ತಿಯ ಜೊತೆಯಲ್ಲಿ ಅಕ್ರಮ ಸಂಭಂದ ಇದೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಹಣ ಮತ್ತು ಒಡವೆ ವಾಪಸ್ ಕೇಳಿದ್ದಾನೆ. ಆದರೆ ಆಕೆ ಈತನಿಗೆ ಕೊಲೆ ಬೆದರಿಕೆ ಹಾಕಿದ್ದಳಂತೆ.

ಕೊನೆ ಕೊನೆಯಲ್ಲಿ ಇಬ್ಬರ ನಡುವೆ ಮನಸ್ಥಾಪ ಹೆಚ್ಚಾಗಿ ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಆದರೆ ರಾತ್ರಿ 11 ಗಂಟೆಯ ನಂತರ ನೇಣಿಗೆ ಶರಣಾಗಿದ್ದಾನೆ‌.‌ ಸ್ಥಳೀಯರು ಯಾರೋ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.‌ದೊಡ್ಡಬಳ್ಳಾಪುರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಾರೆ ಇಳಿ ವಯಸ್ಸಿನಲ್ಲಿ ಅಕ್ರಮ ಸಂಬಂಧದ ಮೋಹಕ್ಕೆ ಸಿಲುಕಿ ಈಗ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಮೃತ ದೇಹವನ್ನು ಪೋಲೀಸರು ಕುಟುಂಬಸ್ಥರಿಗೆ ನೀಡಿ ತನಿಖೆ ಮುಂದುವರಿಸಿದ್ದಾರೆ.

 

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

6 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago