ಆತ ಎರಡು ಮದುವೆ ಆಗಿದ್ದನಂತೆ. ಆದರೆ ಸಂಸಾರದಲ್ಲಿ ಸಮಸ್ಯೆ ಇದೆ ಎಂದು ಮೂರನೇ ಹೆಣ್ಣಿನ ಜೊತೆಯಲ್ಲಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಂತೆ. ಆದರೆ ಆಕೆ ಈತನಿಂದ ಹಣ, ಒಡವೆ ಎಲ್ಲಾ ತೆಗೆದುಕೊಂಡು, ಕೊನೆಗೆ ಹಣ, ಒಡವೆ ಕೊಡಲ್ಲ ಎಂದು ಬೆದರಿಕೆ ಹಾಕಿದ್ದಳಂತೆ. ಅದಕ್ಕೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯನ್ನ ಕೊಂದು, ಎರಡು ದಿನದ ನಂತರ ಆತನೂ ನೇಣಿಗೆ ಶರಣಾಗಿದ್ದಾನೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ………
ಇನ್ನೂ ಕೊಲೆ ಆರೋಪಿ ವೀರಭದ್ರಯ್ಯ ಮತ್ತು ಕೊಲೆಯಾದ ದ್ರಾಕ್ಷಾಯಣಿಗೆ ಅಕ್ರಮ ಸಂಬಂಧ ಇತ್ತಂತೆ. ವೀರಭದ್ರಯ್ಯ ನಿಗೆ ಈ ಮೊದಲೇ ಎರಡು ಮದುವೆ ಆಗಿತ್ತು. ಆದರೂ ಇಳಿ ವಯಸ್ಸಿನಲ್ಲಿ ಮೂರನೇ ಹೆಣ್ಣಿನ ಸಹವಾಸ ಮಾಡಿದ್ದ. ಈಕೆಗಾಗಿ ಲಕ್ಷಾಂತರ ರುಪಾಯಿ ಹಣವನ್ನು ಸಹ ನೀಡಿದ್ದ. ಜೊತೆಗೆ ಒಡವೆಗಳನ್ನೂ ಸಹ ಕೊಡಿಸಿದ್ದನಂತೆ. ಆದರೆ ಮಹಿಳೆಗೆ ಬೇರೊಬ್ಬ ವ್ಯಕ್ತಿಯ ಜೊತೆಯಲ್ಲಿ ಅಕ್ರಮ ಸಂಭಂದ ಇದೆ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಹಣ ಮತ್ತು ಒಡವೆ ವಾಪಸ್ ಕೇಳಿದ್ದಾನೆ. ಆದರೆ ಆಕೆ ಈತನಿಗೆ ಕೊಲೆ ಬೆದರಿಕೆ ಹಾಕಿದ್ದಳಂತೆ.
ಕೊನೆ ಕೊನೆಯಲ್ಲಿ ಇಬ್ಬರ ನಡುವೆ ಮನಸ್ಥಾಪ ಹೆಚ್ಚಾಗಿ ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಆದರೆ ರಾತ್ರಿ 11 ಗಂಟೆಯ ನಂತರ ನೇಣಿಗೆ ಶರಣಾಗಿದ್ದಾನೆ. ಸ್ಥಳೀಯರು ಯಾರೋ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.ದೊಡ್ಡಬಳ್ಳಾಪುರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಒಟ್ಟಾರೆ ಇಳಿ ವಯಸ್ಸಿನಲ್ಲಿ ಅಕ್ರಮ ಸಂಬಂಧದ ಮೋಹಕ್ಕೆ ಸಿಲುಕಿ ಈಗ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಮೃತ ದೇಹವನ್ನು ಪೋಲೀಸರು ಕುಟುಂಬಸ್ಥರಿಗೆ ನೀಡಿ ತನಿಖೆ ಮುಂದುವರಿಸಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…