ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಕುಂಟೆ ಗ್ರಾಮದಲ್ಲಿನ ಲಲಿತಮ್ಮ ಎಂಬುವವರ ಮನೆಗೆ 2020ರ ಆಗಸ್ಟ್ನಲ್ಲಿ ನುಗ್ಗಿ ತಾಯಿ ಮತ್ತು ತಂಗಿ ಎದುರಲ್ಲೇ ಮಗ ಮಂಜುನಾಥ(23) ಎಂಬಾತನನ್ನು ಭೀಕರವಾಗಿ ಕೊಲೆಗೈದು ಡಕಾಯಿತಿ ನಡೆಸಿದ್ದ ಆರೋಪ ಸಾಬೀತು ಆದ ಹಿನ್ನೆಲೆ ಯಾಸಿರ್ ಅಲ್ಪತ್, ಹೇಮಂತ್, ಸೋನು, ಸೋಮಶೇಖರ್, ಮನೋಜ್ ಕಮಾರ್, ಪ್ರಶಾಂತ್, ವೆಂಕಟೇಶ್ ಮತ್ತು ಅಂಶುಕುಮಾರ್ ಎಂಬುವವರಿಗೆ ದೊಡ್ಡಬಳ್ಳಾಪುರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರಗಪ್ಪ ಏಕಾಬೋಟಿ ಅವರು ವಿಚಾರಣೆ ನಡೆಸಿ ಎಲ್ಲಾ ಎಂಟು ಜನ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.
ಈ ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಹಾಗೂ ಡಾ. ಎಂ.ಬಿ.ನವೀನ್ ಕಮಾರ್ ಅವರು ಪ್ರತ್ಯಕ್ಷ ಹಾಗೂ ಪೂರಕ ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ತನಿಖೆಯನ್ನು ನಿರ್ವಹಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ಡಿವೈಎಸ್ಪಿ ರವಿ ಅವರು ಅಭಿನಂದಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…