ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಕುಂಟೆ ಗ್ರಾಮದಲ್ಲಿನ ಲಲಿತಮ್ಮ ಎಂಬುವವರ ಮನೆಗೆ 2020ರ ಆಗಸ್ಟ್ನಲ್ಲಿ ನುಗ್ಗಿ ತಾಯಿ ಮತ್ತು ತಂಗಿ ಎದುರಲ್ಲೇ ಮಗ ಮಂಜುನಾಥ(23) ಎಂಬಾತನನ್ನು ಭೀಕರವಾಗಿ ಕೊಲೆಗೈದು ಡಕಾಯಿತಿ ನಡೆಸಿದ್ದ ಆರೋಪ ಸಾಬೀತು ಆದ ಹಿನ್ನೆಲೆ ಯಾಸಿರ್ ಅಲ್ಪತ್, ಹೇಮಂತ್, ಸೋನು, ಸೋಮಶೇಖರ್, ಮನೋಜ್ ಕಮಾರ್, ಪ್ರಶಾಂತ್, ವೆಂಕಟೇಶ್ ಮತ್ತು ಅಂಶುಕುಮಾರ್ ಎಂಬುವವರಿಗೆ ದೊಡ್ಡಬಳ್ಳಾಪುರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರಗಪ್ಪ ಏಕಾಬೋಟಿ ಅವರು ವಿಚಾರಣೆ ನಡೆಸಿ ಎಲ್ಲಾ ಎಂಟು ಜನ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.
ಈ ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಹಾಗೂ ಡಾ. ಎಂ.ಬಿ.ನವೀನ್ ಕಮಾರ್ ಅವರು ಪ್ರತ್ಯಕ್ಷ ಹಾಗೂ ಪೂರಕ ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ತನಿಖೆಯನ್ನು ನಿರ್ವಹಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ಡಿವೈಎಸ್ಪಿ ರವಿ ಅವರು ಅಭಿನಂದಿಸಿದ್ದಾರೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…