ಕೊಲೆ, ಡಕಾಯಿತಿ ನಡೆಸಿದ್ದ ಎಂಟು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಕುಂಟೆ ಗ್ರಾಮದಲ್ಲಿನ ಲಲಿತಮ್ಮ ಎಂಬುವವರ ಮನೆಗೆ 2020ರ ಆಗಸ್ಟ್‌ನಲ್ಲಿ ನುಗ್ಗಿ ತಾಯಿ ಮತ್ತು ತಂಗಿ ಎದುರಲ್ಲೇ ಮಗ ಮಂಜುನಾಥ(23) ಎಂಬಾತನನ್ನು ಭೀಕರವಾಗಿ ಕೊಲೆಗೈದು ಡಕಾಯಿತಿ ನಡೆಸಿದ್ದ ಆರೋಪ ಸಾಬೀತು ಆದ ಹಿನ್ನೆಲೆ ಯಾಸಿರ್ ಅಲ್ಪತ್, ಹೇಮಂತ್, ಸೋನು, ಸೋಮಶೇಖರ್, ಮನೋಜ್ ಕಮಾರ್, ಪ್ರಶಾಂತ್, ವೆಂಕಟೇಶ್ ಮತ್ತು ಅಂಶುಕುಮಾರ್ ಎಂಬುವವರಿಗೆ ದೊಡ್ಡಬಳ್ಳಾಪುರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರಗಪ್ಪ ಏಕಾಬೋಟಿ ಅವರು ವಿಚಾರಣೆ ನಡೆಸಿ ಎಲ್ಲಾ ಎಂಟು ಜನ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಹಾಗೂ ಡಾ. ಎಂ.ಬಿ.ನವೀನ್ ಕಮಾರ್ ಅವರು ಪ್ರತ್ಯಕ್ಷ ಹಾಗೂ ಪೂರಕ ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಆಶಾ ಹಾಗೂ ನಟರಾಜ್ ವಾದ ಮಂಡಿಸಿದ್ದರು. ಅತ್ಯಂತ ಗಂಭೀರ ಪ್ರಕರಣವಾಗಿದ್ದರಿಂದ ಇದರ ಕೋರ್ಟ್ ಉಸ್ತುವಾರಿಯನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜು ನಿರ್ವಹಿಸಿದ್ದರು.

ತನಿಖೆಯನ್ನು ನಿರ್ವಹಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ಡಿವೈಎಸ್ಪಿ ರವಿ ಅವರು ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

34 minutes ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

10 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

21 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago