ಕೊಲೆ ಮತ್ತು ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಘಟನೆ ಸಾರಾಂಶ
ದೊಡ್ಡಬೆಳವಂಗಲ ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ: 111/2020 ಐ.ಪಿ.ಸಿ ಕಲಂ 396 (ಡಕಾಯಿತಿ ಮತ್ತು ಕೊಲೆ) ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಂಡ ದಿನಾಂಕ: 10.09.2020 ರಂದು ಸಂಜೆ 5.55 ಗಂಟೆಯಲ್ಲಿ ಆರೋಪಿಗಳಾದ ಹೇಮಂತ್ ಕುಮಾರ್ ಹಾಗೂ ಸೋನು ರವರುಗಳು ಕೆಎ-03-ಎಂಸಿ-6915 ಚವರ್ಲೆಟ್ ಕಾರಿನಲ್ಲಿ ದೊಡ್ಡಬಳ್ಳಾಪುರ-ಡಾಬಸ್ ಪೇಟೆ ಮೂಲಕ ತುಮಕೂರು ಕಡೆಗೆ ಹೋಗುತ್ತಿರುತ್ತಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸರ್ಕಾರಿ ವಾಹನಗಳಲ್ಲಿ ಕೊಡಿಗೇಹಳ್ಳಿ ಕಡೆಯಿಂದ ಆರೋಪಿಗಳನ್ನು ಹಿಂಬಾಲಿಸಿಕೊಂಡು ಬಂದು ಕೆಸ್ತೂರು ಗ್ರಾಮದ ಬಳಿ ಬಂಡಿಜಾಡು ರಸ್ತೆಯಲ್ಲಿ ಆರೋಪಿಗಳ ಕಾರನ್ನು ಅಡ್ಡ ಹಾಕಿ ದಸ್ತಗಿರಿ ಮಾಡಲು ಹೋದಾಗ ಇಬ್ಬರೂ ಆರೋಪಿತರುಗಳು ಕೈಗಳಲ್ಲಿ ಚಾಕುಗಳನ್ನು ಹಿಡಿದುಕೊಂಡು ಬಂದು ಹತ್ತಿರ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಿಡಿದುಕೊಳ್ಳಲು ಹೋದ ಪೊಲೀಸರಿಗೆ ಚಾಕುವಿನಿಂದ ಚುಚ್ಚಿ ಹಲ್ಲೆಮಾಡಿ ರಕ್ತಗಾಯಗೊಳಿಸಿ ಕೊಲೆ ಮಾಡಲು ಪ್ರಯತ್ನಿಸಿದ್ದ ಸಂಬಂಧ ಸದರಿ ಆರೋಪಿಗಳ ವಿರುದ್ಧ ಅಂದಿನ ತನಿಖಾಧಿಕಾರಿಗಳಾಗಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್ ಎ.ವಿ ರವರು ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ಸದರಿ ಪ್ರಕರಣವು ಘನ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಪೀಠಾಸೀನ ದೊಡ್ಡಬಳ್ಳಾಪುರದಲ್ಲಿ ಎಸ್.ಸಿ.ನಂ:10003/2021 ರಂತೆ ವಿಚಾರಣೆ ನಡೆದಿದ್ದು, ಸದರಿ ಪ್ರಕರಣದಲ್ಲಿ ಆರೋಪಿತರು ಅಪರಾಧ ಎಸಗಿರುವುದು ಸಾಭೀತಾದ ಹಿನ್ನೆಲೆಯಲ್ಲಿ ಘನ ನ್ಯಾಯಾಧೀಶರಾದ ನಿರ್ಮಲ. ಕೆ ರವರು ದಿನಾಂಕ:23.03.2026 ರಂದು ಪ್ರಕರಣದ ಇಬ್ಬರೂ ಆರೋಪಿತರಿಗೆ ಐ.ಪಿ.ಸಿ ಕಲಂ;307 ರ ಅಪರಾಧಕ್ಕಾಗಿ 10 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ತಲಾ 10,000/- ರೂ ದಂಡ, ಐ.ಪಿ.ಸಿ ಕಲಂ;332 ರ ಅಪರಾಧಕ್ಕಾಗಿ 3 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ ತಲಾ 5,000/- ರೂ ದಂಡ ಮತ್ತು ಐ.ಪಿ.ಸಿ ಕಲಂ; 353 ಅಪರಾಧಕ್ಕಾಗಿ 2 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ. ಸರ್ಕಾರದ ಪರವಾಗಿ ಅಭಿಯೋಜನೆ ಇಲಾಖೆ ವತಿಯಿಂದ ಸರ್ಕಾರಿ ಅಭಿಯೋಜಕರಾದ. ಟಿ.ಎನ್ ನಟರಾಜ ರವರು ವಾದ ಮಂಡಿಸಿದ್ದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…