ಕೊಲೆ ಮತ್ತು ಡಕಾಯಿತಿ ಪ್ರಕರಣ: ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಕೊಲೆ ಮತ್ತು ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಘಟನೆ ಸಾರಾಂಶ

ದೊಡ್ಡಬೆಳವಂಗಲ ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ: 111/2020 ಐ.ಪಿ.ಸಿ ಕಲಂ 396 (ಡಕಾಯಿತಿ ಮತ್ತು ಕೊಲೆ) ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ತಂಡ ದಿನಾಂಕ: 10.09.2020 ರಂದು ಸಂಜೆ 5.55 ಗಂಟೆಯಲ್ಲಿ ಆರೋಪಿಗಳಾದ ಹೇಮಂತ್ ಕುಮಾರ್ ಹಾಗೂ ಸೋನು ರವರುಗಳು ಕೆಎ-03-ಎಂಸಿ-6915 ಚವರ್ಲೆಟ್ ಕಾರಿನಲ್ಲಿ ದೊಡ್ಡಬಳ್ಳಾಪುರ-ಡಾಬಸ್ ಪೇಟೆ ಮೂಲಕ ತುಮಕೂರು ಕಡೆಗೆ ಹೋಗುತ್ತಿರುತ್ತಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸರ್ಕಾರಿ ವಾಹನಗಳಲ್ಲಿ ಕೊಡಿಗೇಹಳ್ಳಿ ಕಡೆಯಿಂದ ಆರೋಪಿಗಳನ್ನು ಹಿಂಬಾಲಿಸಿಕೊಂಡು ಬಂದು ಕೆಸ್ತೂರು ಗ್ರಾಮದ ಬಳಿ ಬಂಡಿಜಾಡು ರಸ್ತೆಯಲ್ಲಿ ಆರೋಪಿಗಳ ಕಾರನ್ನು ಅಡ್ಡ ಹಾಕಿ ದಸ್ತಗಿರಿ ಮಾಡಲು ಹೋದಾಗ ಇಬ್ಬರೂ ಆರೋಪಿತರುಗಳು ಕೈಗಳಲ್ಲಿ ಚಾಕುಗಳನ್ನು ಹಿಡಿದುಕೊಂಡು ಬಂದು ಹತ್ತಿರ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಿಡಿದುಕೊಳ್ಳಲು ಹೋದ ಪೊಲೀಸರಿಗೆ ಚಾಕುವಿನಿಂದ ಚುಚ್ಚಿ ಹಲ್ಲೆಮಾಡಿ ರಕ್ತಗಾಯಗೊಳಿಸಿ ಕೊಲೆ ಮಾಡಲು ಪ್ರಯತ್ನಿಸಿದ್ದ ಸಂಬಂಧ ಸದರಿ ಆರೋಪಿಗಳ ವಿರುದ್ಧ ಅಂದಿನ ತನಿಖಾಧಿಕಾರಿಗಳಾಗಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್ ಎ.ವಿ ರವರು ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಸದರಿ ಪ್ರಕರಣವು ಘನ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಪೀಠಾಸೀನ ದೊಡ್ಡಬಳ್ಳಾಪುರದಲ್ಲಿ ಎಸ್.ಸಿ.ನಂ:10003/2021 ರಂತೆ ವಿಚಾರಣೆ ನಡೆದಿದ್ದು, ಸದರಿ ಪ್ರಕರಣದಲ್ಲಿ ಆರೋಪಿತರು ಅಪರಾಧ ಎಸಗಿರುವುದು ಸಾಭೀತಾದ ಹಿನ್ನೆಲೆಯಲ್ಲಿ ಘನ ನ್ಯಾಯಾಧೀಶರಾದ ನಿರ್ಮಲ. ಕೆ ರವರು ದಿನಾಂಕ:23.03.2026 ರಂದು ಪ್ರಕರಣದ ಇಬ್ಬರೂ ಆರೋಪಿತರಿಗೆ ಐ.ಪಿ.ಸಿ ಕಲಂ;307 ರ ಅಪರಾಧಕ್ಕಾಗಿ 10 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ತಲಾ 10,000/- ರೂ ದಂಡ, ಐ.ಪಿ.ಸಿ ಕಲಂ;332 ರ ಅಪರಾಧಕ್ಕಾಗಿ 3 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ ತಲಾ 5,000/- ರೂ ದಂಡ ಮತ್ತು ಐ.ಪಿ.ಸಿ ಕಲಂ; 353 ಅಪರಾಧಕ್ಕಾಗಿ 2 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ. ಸರ್ಕಾರದ ಪರವಾಗಿ ಅಭಿಯೋಜನೆ ಇಲಾಖೆ ವತಿಯಿಂದ ಸರ್ಕಾರಿ ಅಭಿಯೋಜಕರಾದ. ಟಿ.ಎನ್ ನಟರಾಜ ರವರು ವಾದ ಮಂಡಿಸಿದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago