ಕೊಲೆ ಮಾಡಿ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿಯ ಮೃತದೇಹವು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯ ಮಾಣಿಕ್ಯನಹಳ್ಳಿಯ ವೆಂಕಟೇಶ್ ಮಗಳಾದ ದೀಪಿಕಾ(28), ಕೊಲೆಯಾಗಿರುವ ಅತಿಥಿ ಶಿಕ್ಷಕಿ.
ಮಾಣಿಕ್ಯನಹಳ್ಳಿ ಗ್ರಾಮದ ಲೋಕೇಶ್ ಎಂಬಾತನಿಗೆ ದೀಪಿಕಾಳನ್ನ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ 8 ವರ್ಷದ ಮಗು ಸಹ ಇದೆ. ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದರು.
ಕಳೆದ ಶನಿವಾರ ಮಧ್ಯಾಹ್ನ ತರಗತಿ ಮುಗಿಸಿ ಬೈಕ್ ನಲ್ಲಿ ವಾಪಸ್ ಮನೆಗೆ ಹೋಗಿದ್ದರು. ಶನಿವಾರ ಸಂಜೆ ವೇಳೆ ಸ್ಕೂಟರ್ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇರುವುದನ್ನ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಅಂದು ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಅದರ ನಂಬರ್ ನೆರವಿನಿಂದ ಶಿಕ್ಷಕಿಯ ಊರು ಪತ್ತೆ ಹಚ್ಚಿದ್ದರು.
ಇನ್ನಷ್ಟು ಪರಿಶೀಲನೆ ನಡೆಸಿದ ಪೊಲೀಸರು, ಬೆಟ್ಟದ ತಪ್ಪಲಿನಲ್ಲೇ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಶಿಕ್ಷಕಿಯ ಶವ ಪತ್ತೆಯಾಗಿದೆ.
ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…