ಕೊಲೆ ಮಾಡಿ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿಯ ಮೃತದೇಹವು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯ ಮಾಣಿಕ್ಯನಹಳ್ಳಿಯ ವೆಂಕಟೇಶ್ ಮಗಳಾದ ದೀಪಿಕಾ(28), ಕೊಲೆಯಾಗಿರುವ ಅತಿಥಿ ಶಿಕ್ಷಕಿ.
ಮಾಣಿಕ್ಯನಹಳ್ಳಿ ಗ್ರಾಮದ ಲೋಕೇಶ್ ಎಂಬಾತನಿಗೆ ದೀಪಿಕಾಳನ್ನ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ 8 ವರ್ಷದ ಮಗು ಸಹ ಇದೆ. ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದರು.
ಕಳೆದ ಶನಿವಾರ ಮಧ್ಯಾಹ್ನ ತರಗತಿ ಮುಗಿಸಿ ಬೈಕ್ ನಲ್ಲಿ ವಾಪಸ್ ಮನೆಗೆ ಹೋಗಿದ್ದರು. ಶನಿವಾರ ಸಂಜೆ ವೇಳೆ ಸ್ಕೂಟರ್ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇರುವುದನ್ನ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಅಂದು ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಅದರ ನಂಬರ್ ನೆರವಿನಿಂದ ಶಿಕ್ಷಕಿಯ ಊರು ಪತ್ತೆ ಹಚ್ಚಿದ್ದರು.
ಇನ್ನಷ್ಟು ಪರಿಶೀಲನೆ ನಡೆಸಿದ ಪೊಲೀಸರು, ಬೆಟ್ಟದ ತಪ್ಪಲಿನಲ್ಲೇ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಶಿಕ್ಷಕಿಯ ಶವ ಪತ್ತೆಯಾಗಿದೆ.
ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…