ಕೊಲೆ ಮಾಡಿ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿಯ ಮೃತದೇಹವು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯ ಮಾಣಿಕ್ಯನಹಳ್ಳಿಯ ವೆಂಕಟೇಶ್ ಮಗಳಾದ ದೀಪಿಕಾ(28), ಕೊಲೆಯಾಗಿರುವ ಅತಿಥಿ ಶಿಕ್ಷಕಿ.
ಮಾಣಿಕ್ಯನಹಳ್ಳಿ ಗ್ರಾಮದ ಲೋಕೇಶ್ ಎಂಬಾತನಿಗೆ ದೀಪಿಕಾಳನ್ನ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ 8 ವರ್ಷದ ಮಗು ಸಹ ಇದೆ. ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದರು.
ಕಳೆದ ಶನಿವಾರ ಮಧ್ಯಾಹ್ನ ತರಗತಿ ಮುಗಿಸಿ ಬೈಕ್ ನಲ್ಲಿ ವಾಪಸ್ ಮನೆಗೆ ಹೋಗಿದ್ದರು. ಶನಿವಾರ ಸಂಜೆ ವೇಳೆ ಸ್ಕೂಟರ್ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇರುವುದನ್ನ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಅಂದು ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಅದರ ನಂಬರ್ ನೆರವಿನಿಂದ ಶಿಕ್ಷಕಿಯ ಊರು ಪತ್ತೆ ಹಚ್ಚಿದ್ದರು.
ಇನ್ನಷ್ಟು ಪರಿಶೀಲನೆ ನಡೆಸಿದ ಪೊಲೀಸರು, ಬೆಟ್ಟದ ತಪ್ಪಲಿನಲ್ಲೇ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಶಿಕ್ಷಕಿಯ ಶವ ಪತ್ತೆಯಾಗಿದೆ.
ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…