ಕೊಳವೆಬಾವಿ ಕೊರೆಯಲು ನಿರಾಕ್ಷೇಪಣಾ ಪತ್ರ ಕಡ್ಡಾಯ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಮಾರ್ಚ್ 2023ರ ಅಂತ್ಯದ ಅಂತರ್ಜಲ ಮೌಲೀಕರಣದ ವರದಿಯ ಪ್ರಕಾರ ಜಿಲ್ಲೆಯಲ್ಲಿರುವ ನಾಲ್ಕು ತಾಲ್ಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲ್ಲೂಕುಗಳೆಂದು ವರ್ಗೀಕರಿಸಲಾಗಿದ್ದು ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಕಡ್ಡಾಯವಾಗಿ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಪ್ರಸ್ತುತ ಬೇಸಿಗೆ ಹನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಇದರಿಂದ ಕುಡಿಯುವ ನೀರು, ಕೃಷಿ ಕಾರ್ಯ, ದಿನ ಬಳಕೆಯ ನೀರಿನ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಹೆಚ್ಚಿನ ಕೊಳವೆ ಬಾವಿ, ಕೆರೆ, ಜಲಾಶಯಗಳು ಬತ್ತಿ ಹೋಗಿದ್ದು ಉಳಿದ ನೀರಿನ ಸಂರಕ್ಷಣೆ ಆಗಬೇಕಿದೆ. ಆದುದರಿಂದ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಬಿದ್ದಂತಹ ಮಳೆ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಕಡ್ಡಾಯವಾಗಿ ಅಂತರ್ಜಲ ಮರುಪೂರಣ ರಚನೆಗಳನ್ನು ನಿರ್ಮಿಸಿ ಅಂತರ್ಜಲ ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು. ಮತ್ತೆ ಮಳೆ ಆರಂಭವಾಗುವವರೆಗೂ ನೀರನ್ನು ಮಿತವಾಗಿ ಬಳಸಿ ಅಂತರ್ಜಲ ವ್ಯರ್ಥವಾಗಿ ಪೋಲ್ ಆಗದಂತೆ ಅಗತ್ಯಕ್ಕೆ ತಕ್ಕಂತೆ ಸಾರ್ವಜನಿಕರು ಬಳಕೆ ಮಾಡಬೇಕು.

ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012ರ ಅನುಸಾರ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಮತ್ತು ಇತರೆ ಉದ್ದೇಶಕ್ಕಾಗಿ ಕೊಳವೆಬಾವಿ ಕೊರೆಯಲು ಮತ್ತು ಕೊರೆದ ಕೊಳವೆಬಾವಿಗಳಿಂದ ಅಂತರ್ಜಲ ಬಳಸಲು ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು. ಕೊಳವೆಬಾವಿ ಕೊರೆಯುವ ಮಾಲೀಕರು ಕಡ್ಡಾಯವಾಗಿ ತಾವು ಹೊಂದಿದ ರಿಗ್ ಯಂತ್ರಗಳನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸಿ ‘ನಮೂನೆ-7ಎ’ ಪಡೆದು ಕೊಳವೆಬಾವಿ ಕೊರೆಯಬೇಕು. ಕೊರೆದ ಕೊಳವೆಬಾವಿ ವಿಫಲವಾದರೆ ಸಂಬಂಧಪಟ್ಟ ಜಮೀನು ಮಾಲೀಕರು ಹಾಗೂ ರಿಗ್ ಮಾಲೀಕರು ವಿಫಲ ತೆರೆದ ಕೊಳವೆಬಾವಿಯನ್ನು ಸುರಕ್ಷಿತವಾಗಿ ಮುಚ್ಚಲು ಕ್ರಮಕೈಗೊಳ್ಳಬೇಕು. ಇದರಿಂದ ತೆರೆದ ವಿಫಲ ಕೊಳವೆಬಾವಿಗಳಿಗೆ ಚಿಕ್ಕ ಮಕ್ಕಳು ಬೀಳುವ ಸಂಭವ ಅಥವಾ ಇನ್ನಿತರ ಅವಘಡಗಳನ್ನು ತಪ್ಪಿಸಬಹುದು. ಇದನ್ನು ಎಲ್ಲರೂ ಗಂಭಿರವಾಗಿ ಪರಿಗಣಿಸತಕ್ಕದ್ದು.

ಕೊಳವೆಬಾವಿ ಕೊರೆಯುವ ಮುನ್ನ ಸಂಬಂಧಪಟ್ಟ ಜಮೀನು ಮಾಲೀಕರು ಕಡ್ಡಾಯವಾಗಿ ಸ್ಥಳೀಯ ಗ್ರಾಮಪಂಚಾಯತ್/ಪಟ್ಟಣ ಪಂಚಾಯತ್/ನಗರಸಭೆ/ಪುರಸಭೆಗೆ ತಿಳಿಸಿ ನಿರಾಕ್ಷೇಪಣಾ ಪತ್ರ ಪಡೆದು ನಂತರ ಜಿಲ್ಲಾ ಅಂತರ್ಜಲ ಕಚೇರಿಗೆ ಅರ್ಜಿ ಸಲ್ಲಿಸಿ ಕೊಳವೆಬಾವಿ ಕೊರೆಯಲು ನಿಯಮಾನುಸಾರ ಅನುಮತಿ ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂತರ್ಜಲ ಕಛೇರಿ, ಅಂತರ್ಜಲ ನಿರ್ದೇಶನಾಲಯ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

2 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

12 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

13 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

18 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

20 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

24 hours ago