ಮಾರ್ಚ್ 2023ರ ಅಂತ್ಯದ ಅಂತರ್ಜಲ ಮೌಲೀಕರಣದ ವರದಿಯ ಪ್ರಕಾರ ಜಿಲ್ಲೆಯಲ್ಲಿರುವ ನಾಲ್ಕು ತಾಲ್ಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲ್ಲೂಕುಗಳೆಂದು ವರ್ಗೀಕರಿಸಲಾಗಿದ್ದು ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಕಡ್ಡಾಯವಾಗಿ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
ಪ್ರಸ್ತುತ ಬೇಸಿಗೆ ಹನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಇದರಿಂದ ಕುಡಿಯುವ ನೀರು, ಕೃಷಿ ಕಾರ್ಯ, ದಿನ ಬಳಕೆಯ ನೀರಿನ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಹೆಚ್ಚಿನ ಕೊಳವೆ ಬಾವಿ, ಕೆರೆ, ಜಲಾಶಯಗಳು ಬತ್ತಿ ಹೋಗಿದ್ದು ಉಳಿದ ನೀರಿನ ಸಂರಕ್ಷಣೆ ಆಗಬೇಕಿದೆ. ಆದುದರಿಂದ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಬಿದ್ದಂತಹ ಮಳೆ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಕಡ್ಡಾಯವಾಗಿ ಅಂತರ್ಜಲ ಮರುಪೂರಣ ರಚನೆಗಳನ್ನು ನಿರ್ಮಿಸಿ ಅಂತರ್ಜಲ ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು. ಮತ್ತೆ ಮಳೆ ಆರಂಭವಾಗುವವರೆಗೂ ನೀರನ್ನು ಮಿತವಾಗಿ ಬಳಸಿ ಅಂತರ್ಜಲ ವ್ಯರ್ಥವಾಗಿ ಪೋಲ್ ಆಗದಂತೆ ಅಗತ್ಯಕ್ಕೆ ತಕ್ಕಂತೆ ಸಾರ್ವಜನಿಕರು ಬಳಕೆ ಮಾಡಬೇಕು.
ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012ರ ಅನುಸಾರ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಮತ್ತು ಇತರೆ ಉದ್ದೇಶಕ್ಕಾಗಿ ಕೊಳವೆಬಾವಿ ಕೊರೆಯಲು ಮತ್ತು ಕೊರೆದ ಕೊಳವೆಬಾವಿಗಳಿಂದ ಅಂತರ್ಜಲ ಬಳಸಲು ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು. ಕೊಳವೆಬಾವಿ ಕೊರೆಯುವ ಮಾಲೀಕರು ಕಡ್ಡಾಯವಾಗಿ ತಾವು ಹೊಂದಿದ ರಿಗ್ ಯಂತ್ರಗಳನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸಿ ‘ನಮೂನೆ-7ಎ’ ಪಡೆದು ಕೊಳವೆಬಾವಿ ಕೊರೆಯಬೇಕು. ಕೊರೆದ ಕೊಳವೆಬಾವಿ ವಿಫಲವಾದರೆ ಸಂಬಂಧಪಟ್ಟ ಜಮೀನು ಮಾಲೀಕರು ಹಾಗೂ ರಿಗ್ ಮಾಲೀಕರು ವಿಫಲ ತೆರೆದ ಕೊಳವೆಬಾವಿಯನ್ನು ಸುರಕ್ಷಿತವಾಗಿ ಮುಚ್ಚಲು ಕ್ರಮಕೈಗೊಳ್ಳಬೇಕು. ಇದರಿಂದ ತೆರೆದ ವಿಫಲ ಕೊಳವೆಬಾವಿಗಳಿಗೆ ಚಿಕ್ಕ ಮಕ್ಕಳು ಬೀಳುವ ಸಂಭವ ಅಥವಾ ಇನ್ನಿತರ ಅವಘಡಗಳನ್ನು ತಪ್ಪಿಸಬಹುದು. ಇದನ್ನು ಎಲ್ಲರೂ ಗಂಭಿರವಾಗಿ ಪರಿಗಣಿಸತಕ್ಕದ್ದು.
ಕೊಳವೆಬಾವಿ ಕೊರೆಯುವ ಮುನ್ನ ಸಂಬಂಧಪಟ್ಟ ಜಮೀನು ಮಾಲೀಕರು ಕಡ್ಡಾಯವಾಗಿ ಸ್ಥಳೀಯ ಗ್ರಾಮಪಂಚಾಯತ್/ಪಟ್ಟಣ ಪಂಚಾಯತ್/ನಗರಸಭೆ/ಪುರಸಭೆಗೆ ತಿಳಿಸಿ ನಿರಾಕ್ಷೇಪಣಾ ಪತ್ರ ಪಡೆದು ನಂತರ ಜಿಲ್ಲಾ ಅಂತರ್ಜಲ ಕಚೇರಿಗೆ ಅರ್ಜಿ ಸಲ್ಲಿಸಿ ಕೊಳವೆಬಾವಿ ಕೊರೆಯಲು ನಿಯಮಾನುಸಾರ ಅನುಮತಿ ಪಡೆಯಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂತರ್ಜಲ ಕಛೇರಿ, ಅಂತರ್ಜಲ ನಿರ್ದೇಶನಾಲಯ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…