ಕೊಳವೆಬಾವಿ ಕೊರೆಯಲು ನಿರಾಕ್ಷೇಪಣಾ ಪತ್ರ ಕಡ್ಡಾಯ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಮಾರ್ಚ್ 2023ರ ಅಂತ್ಯದ ಅಂತರ್ಜಲ ಮೌಲೀಕರಣದ ವರದಿಯ ಪ್ರಕಾರ ಜಿಲ್ಲೆಯಲ್ಲಿರುವ ನಾಲ್ಕು ತಾಲ್ಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲ್ಲೂಕುಗಳೆಂದು ವರ್ಗೀಕರಿಸಲಾಗಿದ್ದು ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಕಡ್ಡಾಯವಾಗಿ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಪ್ರಸ್ತುತ ಬೇಸಿಗೆ ಹನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಇದರಿಂದ ಕುಡಿಯುವ ನೀರು, ಕೃಷಿ ಕಾರ್ಯ, ದಿನ ಬಳಕೆಯ ನೀರಿನ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಹೆಚ್ಚಿನ ಕೊಳವೆ ಬಾವಿ, ಕೆರೆ, ಜಲಾಶಯಗಳು ಬತ್ತಿ ಹೋಗಿದ್ದು ಉಳಿದ ನೀರಿನ ಸಂರಕ್ಷಣೆ ಆಗಬೇಕಿದೆ. ಆದುದರಿಂದ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಬಿದ್ದಂತಹ ಮಳೆ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಕಡ್ಡಾಯವಾಗಿ ಅಂತರ್ಜಲ ಮರುಪೂರಣ ರಚನೆಗಳನ್ನು ನಿರ್ಮಿಸಿ ಅಂತರ್ಜಲ ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು. ಮತ್ತೆ ಮಳೆ ಆರಂಭವಾಗುವವರೆಗೂ ನೀರನ್ನು ಮಿತವಾಗಿ ಬಳಸಿ ಅಂತರ್ಜಲ ವ್ಯರ್ಥವಾಗಿ ಪೋಲ್ ಆಗದಂತೆ ಅಗತ್ಯಕ್ಕೆ ತಕ್ಕಂತೆ ಸಾರ್ವಜನಿಕರು ಬಳಕೆ ಮಾಡಬೇಕು.

ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012ರ ಅನುಸಾರ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಮತ್ತು ಇತರೆ ಉದ್ದೇಶಕ್ಕಾಗಿ ಕೊಳವೆಬಾವಿ ಕೊರೆಯಲು ಮತ್ತು ಕೊರೆದ ಕೊಳವೆಬಾವಿಗಳಿಂದ ಅಂತರ್ಜಲ ಬಳಸಲು ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು. ಕೊಳವೆಬಾವಿ ಕೊರೆಯುವ ಮಾಲೀಕರು ಕಡ್ಡಾಯವಾಗಿ ತಾವು ಹೊಂದಿದ ರಿಗ್ ಯಂತ್ರಗಳನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸಿ ‘ನಮೂನೆ-7ಎ’ ಪಡೆದು ಕೊಳವೆಬಾವಿ ಕೊರೆಯಬೇಕು. ಕೊರೆದ ಕೊಳವೆಬಾವಿ ವಿಫಲವಾದರೆ ಸಂಬಂಧಪಟ್ಟ ಜಮೀನು ಮಾಲೀಕರು ಹಾಗೂ ರಿಗ್ ಮಾಲೀಕರು ವಿಫಲ ತೆರೆದ ಕೊಳವೆಬಾವಿಯನ್ನು ಸುರಕ್ಷಿತವಾಗಿ ಮುಚ್ಚಲು ಕ್ರಮಕೈಗೊಳ್ಳಬೇಕು. ಇದರಿಂದ ತೆರೆದ ವಿಫಲ ಕೊಳವೆಬಾವಿಗಳಿಗೆ ಚಿಕ್ಕ ಮಕ್ಕಳು ಬೀಳುವ ಸಂಭವ ಅಥವಾ ಇನ್ನಿತರ ಅವಘಡಗಳನ್ನು ತಪ್ಪಿಸಬಹುದು. ಇದನ್ನು ಎಲ್ಲರೂ ಗಂಭಿರವಾಗಿ ಪರಿಗಣಿಸತಕ್ಕದ್ದು.

ಕೊಳವೆಬಾವಿ ಕೊರೆಯುವ ಮುನ್ನ ಸಂಬಂಧಪಟ್ಟ ಜಮೀನು ಮಾಲೀಕರು ಕಡ್ಡಾಯವಾಗಿ ಸ್ಥಳೀಯ ಗ್ರಾಮಪಂಚಾಯತ್/ಪಟ್ಟಣ ಪಂಚಾಯತ್/ನಗರಸಭೆ/ಪುರಸಭೆಗೆ ತಿಳಿಸಿ ನಿರಾಕ್ಷೇಪಣಾ ಪತ್ರ ಪಡೆದು ನಂತರ ಜಿಲ್ಲಾ ಅಂತರ್ಜಲ ಕಚೇರಿಗೆ ಅರ್ಜಿ ಸಲ್ಲಿಸಿ ಕೊಳವೆಬಾವಿ ಕೊರೆಯಲು ನಿಯಮಾನುಸಾರ ಅನುಮತಿ ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂತರ್ಜಲ ಕಛೇರಿ, ಅಂತರ್ಜಲ ನಿರ್ದೇಶನಾಲಯ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

26 minutes ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago