ಕೊಳವೆಬಾವಿ ಕೊರೆಯಲು ನಿರಾಕ್ಷೇಪಣಾ ಪತ್ರ ಕಡ್ಡಾಯ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಮಾರ್ಚ್ 2023ರ ಅಂತ್ಯದ ಅಂತರ್ಜಲ ಮೌಲೀಕರಣದ ವರದಿಯ ಪ್ರಕಾರ ಜಿಲ್ಲೆಯಲ್ಲಿರುವ ನಾಲ್ಕು ತಾಲ್ಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲ್ಲೂಕುಗಳೆಂದು ವರ್ಗೀಕರಿಸಲಾಗಿದ್ದು ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಕಡ್ಡಾಯವಾಗಿ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಪ್ರಸ್ತುತ ಬೇಸಿಗೆ ಹನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಇದರಿಂದ ಕುಡಿಯುವ ನೀರು, ಕೃಷಿ ಕಾರ್ಯ, ದಿನ ಬಳಕೆಯ ನೀರಿನ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಹೆಚ್ಚಿನ ಕೊಳವೆ ಬಾವಿ, ಕೆರೆ, ಜಲಾಶಯಗಳು ಬತ್ತಿ ಹೋಗಿದ್ದು ಉಳಿದ ನೀರಿನ ಸಂರಕ್ಷಣೆ ಆಗಬೇಕಿದೆ. ಆದುದರಿಂದ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಬಿದ್ದಂತಹ ಮಳೆ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಕಡ್ಡಾಯವಾಗಿ ಅಂತರ್ಜಲ ಮರುಪೂರಣ ರಚನೆಗಳನ್ನು ನಿರ್ಮಿಸಿ ಅಂತರ್ಜಲ ಸಂರಕ್ಷಣೆ ಮಾಡಲು ಕ್ರಮ ಕೈಗೊಳ್ಳಬೇಕು. ಮತ್ತೆ ಮಳೆ ಆರಂಭವಾಗುವವರೆಗೂ ನೀರನ್ನು ಮಿತವಾಗಿ ಬಳಸಿ ಅಂತರ್ಜಲ ವ್ಯರ್ಥವಾಗಿ ಪೋಲ್ ಆಗದಂತೆ ಅಗತ್ಯಕ್ಕೆ ತಕ್ಕಂತೆ ಸಾರ್ವಜನಿಕರು ಬಳಕೆ ಮಾಡಬೇಕು.

ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012ರ ಅನುಸಾರ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಮತ್ತು ಇತರೆ ಉದ್ದೇಶಕ್ಕಾಗಿ ಕೊಳವೆಬಾವಿ ಕೊರೆಯಲು ಮತ್ತು ಕೊರೆದ ಕೊಳವೆಬಾವಿಗಳಿಂದ ಅಂತರ್ಜಲ ಬಳಸಲು ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು. ಕೊಳವೆಬಾವಿ ಕೊರೆಯುವ ಮಾಲೀಕರು ಕಡ್ಡಾಯವಾಗಿ ತಾವು ಹೊಂದಿದ ರಿಗ್ ಯಂತ್ರಗಳನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸಿ ‘ನಮೂನೆ-7ಎ’ ಪಡೆದು ಕೊಳವೆಬಾವಿ ಕೊರೆಯಬೇಕು. ಕೊರೆದ ಕೊಳವೆಬಾವಿ ವಿಫಲವಾದರೆ ಸಂಬಂಧಪಟ್ಟ ಜಮೀನು ಮಾಲೀಕರು ಹಾಗೂ ರಿಗ್ ಮಾಲೀಕರು ವಿಫಲ ತೆರೆದ ಕೊಳವೆಬಾವಿಯನ್ನು ಸುರಕ್ಷಿತವಾಗಿ ಮುಚ್ಚಲು ಕ್ರಮಕೈಗೊಳ್ಳಬೇಕು. ಇದರಿಂದ ತೆರೆದ ವಿಫಲ ಕೊಳವೆಬಾವಿಗಳಿಗೆ ಚಿಕ್ಕ ಮಕ್ಕಳು ಬೀಳುವ ಸಂಭವ ಅಥವಾ ಇನ್ನಿತರ ಅವಘಡಗಳನ್ನು ತಪ್ಪಿಸಬಹುದು. ಇದನ್ನು ಎಲ್ಲರೂ ಗಂಭಿರವಾಗಿ ಪರಿಗಣಿಸತಕ್ಕದ್ದು.

ಕೊಳವೆಬಾವಿ ಕೊರೆಯುವ ಮುನ್ನ ಸಂಬಂಧಪಟ್ಟ ಜಮೀನು ಮಾಲೀಕರು ಕಡ್ಡಾಯವಾಗಿ ಸ್ಥಳೀಯ ಗ್ರಾಮಪಂಚಾಯತ್/ಪಟ್ಟಣ ಪಂಚಾಯತ್/ನಗರಸಭೆ/ಪುರಸಭೆಗೆ ತಿಳಿಸಿ ನಿರಾಕ್ಷೇಪಣಾ ಪತ್ರ ಪಡೆದು ನಂತರ ಜಿಲ್ಲಾ ಅಂತರ್ಜಲ ಕಚೇರಿಗೆ ಅರ್ಜಿ ಸಲ್ಲಿಸಿ ಕೊಳವೆಬಾವಿ ಕೊರೆಯಲು ನಿಯಮಾನುಸಾರ ಅನುಮತಿ ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂತರ್ಜಲ ಕಛೇರಿ, ಅಂತರ್ಜಲ ನಿರ್ದೇಶನಾಲಯ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

11 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

12 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

13 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

13 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

17 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

19 hours ago