Categories: ಐಪಿಎಲ್

ಕೊಹ್ಲಿ – ಡುಪ್ಲೆಸಿ ಭರ್ಜರಿ ಬ್ಯಾಟಿಂಗ್ : ಆರ್ ಸಿಬಿ ಶುಭಾರಂಭ

ಬೆಂಗಳೂರು: ಮೂರು ವರ್ಷಗಳ ಬಳಿಕ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನುಭವಿ ಆಟಗಾರ ವಿರಾಟ್ ಕೊಹ್ಲಿ ಹಾಗೂ ನಾಯಕ ಪಾಫ್ ಡುಪ್ಲೆಸಿ ಅವರ ಶತಕದ ಜೊತೆಯಾಟದಿಂದ ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಪಡೆಯಿತು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಬೆಂಗಳೂರು ತಂಡದ ನಾಯಕ ಪಾಫ್ ಡುಪ್ಲೆಸಿ ಮುಂಬೈ ಇಂಡಿಯನ್ಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆದರೆ ಶಿಸ್ತು ಬದ್ಧ ಬೌಲಿಂಗ್ ನಡೆಸಿದ ಆರ್ ಸಿಬಿ ಎದುರು ಬಲಿಷ್ಠ ಮುಂಬೈ ತಂಡದ ಬ್ಯಾಟಿಂಗ್ ಪಡೆ ಮಂಕಾಗಿತ್ತು.

ಆರಂಭಿಕ ಜೋಡಿ ನಾಯಕ ರೋಹಿತ್ ಶರ್ಮಾ (1), ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (10) ಕ್ರಮವಾಗಿ ಆಕಾಶ್ ದೀಪ್ ಹಾಗೂ ಮೊಹಮ್ಮದ್ ಸಿರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಕೆಮರೂನ್ ಗ್ರೀನ್ ಹೆಚ್ಚು ಕಾಲ ನಿಲ್ಲಲಿಲ್ಲ, ಬೌಲರ್ ಟೊಪ್ಲಿಗೆ ವಿಕೆಟ್ ಒಪ್ಪಿಸಿದರು.

20 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದವರು ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಸೂರ್ಯ ಕುಮಾರ್ ಯಾದವ್ (15) ಹಾಗೂ ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ (84) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿದರು.

172 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡಕ್ಕೆ ಈ ಮೊತ್ತ ಸವಾಲು ಎನಿಸಲಿಲ್ಲ, ಛೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ (82) ಹಾಗೂ ನಾಯಕ ಪಾಫ್ ಡುಪ್ಲೆಸಿ (73) ಮೊದಲ ವಿಕೆಟ್ ಜೊತೆಯಾಟಕ್ಕೆ 143 ರನ್ ಗಳಿಸಿದರು, ನಂತರ ಬಂದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (0) ನಿರಾಸೆ ಮೂಡಿಸಿದರು.

ವಿರಾಟ್ ಕೊಹ್ಲಿ ಜೊತೆಯಾದ ಮ್ಯಾಕ್ಸ್ ವೆಲ್ (12) ಗೆಲುವಿನ ದಡ ಸೇರಿಸಿದರು, ಮುಂಬೈ ತಂಡದ ಎಲ್ಲಾ ಬೌಲರ್‌ಗಳು ದುಬಾರಿಯಾದರು, ಉತ್ತಮ ಪ್ರದರ್ಶನ ತೋರಿದ ನಾಯಕ ಪಾಫ್ ಡುಪ್ಲೆಸಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

20 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago