ಬೆಂಗಳೂರು: ಮೂರು ವರ್ಷಗಳ ಬಳಿಕ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನುಭವಿ ಆಟಗಾರ ವಿರಾಟ್ ಕೊಹ್ಲಿ ಹಾಗೂ ನಾಯಕ ಪಾಫ್ ಡುಪ್ಲೆಸಿ ಅವರ ಶತಕದ ಜೊತೆಯಾಟದಿಂದ ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಪಡೆಯಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಬೆಂಗಳೂರು ತಂಡದ ನಾಯಕ ಪಾಫ್ ಡುಪ್ಲೆಸಿ ಮುಂಬೈ ಇಂಡಿಯನ್ಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆದರೆ ಶಿಸ್ತು ಬದ್ಧ ಬೌಲಿಂಗ್ ನಡೆಸಿದ ಆರ್ ಸಿಬಿ ಎದುರು ಬಲಿಷ್ಠ ಮುಂಬೈ ತಂಡದ ಬ್ಯಾಟಿಂಗ್ ಪಡೆ ಮಂಕಾಗಿತ್ತು.
20 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದವರು ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಸೂರ್ಯ ಕುಮಾರ್ ಯಾದವ್ (15) ಹಾಗೂ ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ (84) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿದರು.
172 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡಕ್ಕೆ ಈ ಮೊತ್ತ ಸವಾಲು ಎನಿಸಲಿಲ್ಲ, ಛೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ (82) ಹಾಗೂ ನಾಯಕ ಪಾಫ್ ಡುಪ್ಲೆಸಿ (73) ಮೊದಲ ವಿಕೆಟ್ ಜೊತೆಯಾಟಕ್ಕೆ 143 ರನ್ ಗಳಿಸಿದರು, ನಂತರ ಬಂದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (0) ನಿರಾಸೆ ಮೂಡಿಸಿದರು.
ವಿರಾಟ್ ಕೊಹ್ಲಿ ಜೊತೆಯಾದ ಮ್ಯಾಕ್ಸ್ ವೆಲ್ (12) ಗೆಲುವಿನ ದಡ ಸೇರಿಸಿದರು, ಮುಂಬೈ ತಂಡದ ಎಲ್ಲಾ ಬೌಲರ್ಗಳು ದುಬಾರಿಯಾದರು, ಉತ್ತಮ ಪ್ರದರ್ಶನ ತೋರಿದ ನಾಯಕ ಪಾಫ್ ಡುಪ್ಲೆಸಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…