ಬೆಂಗಳೂರು: ಮೂರು ವರ್ಷಗಳ ಬಳಿಕ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನುಭವಿ ಆಟಗಾರ ವಿರಾಟ್ ಕೊಹ್ಲಿ ಹಾಗೂ ನಾಯಕ ಪಾಫ್ ಡುಪ್ಲೆಸಿ ಅವರ ಶತಕದ ಜೊತೆಯಾಟದಿಂದ ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಪಡೆಯಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಬೆಂಗಳೂರು ತಂಡದ ನಾಯಕ ಪಾಫ್ ಡುಪ್ಲೆಸಿ ಮುಂಬೈ ಇಂಡಿಯನ್ಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆದರೆ ಶಿಸ್ತು ಬದ್ಧ ಬೌಲಿಂಗ್ ನಡೆಸಿದ ಆರ್ ಸಿಬಿ ಎದುರು ಬಲಿಷ್ಠ ಮುಂಬೈ ತಂಡದ ಬ್ಯಾಟಿಂಗ್ ಪಡೆ ಮಂಕಾಗಿತ್ತು.
20 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದವರು ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಸೂರ್ಯ ಕುಮಾರ್ ಯಾದವ್ (15) ಹಾಗೂ ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ (84) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿದರು.
172 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡಕ್ಕೆ ಈ ಮೊತ್ತ ಸವಾಲು ಎನಿಸಲಿಲ್ಲ, ಛೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ (82) ಹಾಗೂ ನಾಯಕ ಪಾಫ್ ಡುಪ್ಲೆಸಿ (73) ಮೊದಲ ವಿಕೆಟ್ ಜೊತೆಯಾಟಕ್ಕೆ 143 ರನ್ ಗಳಿಸಿದರು, ನಂತರ ಬಂದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (0) ನಿರಾಸೆ ಮೂಡಿಸಿದರು.
ವಿರಾಟ್ ಕೊಹ್ಲಿ ಜೊತೆಯಾದ ಮ್ಯಾಕ್ಸ್ ವೆಲ್ (12) ಗೆಲುವಿನ ದಡ ಸೇರಿಸಿದರು, ಮುಂಬೈ ತಂಡದ ಎಲ್ಲಾ ಬೌಲರ್ಗಳು ದುಬಾರಿಯಾದರು, ಉತ್ತಮ ಪ್ರದರ್ಶನ ತೋರಿದ ನಾಯಕ ಪಾಫ್ ಡುಪ್ಲೆಸಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…