ಬೆಂಗಳೂರು: ಮೂರು ವರ್ಷಗಳ ಬಳಿಕ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನುಭವಿ ಆಟಗಾರ ವಿರಾಟ್ ಕೊಹ್ಲಿ ಹಾಗೂ ನಾಯಕ ಪಾಫ್ ಡುಪ್ಲೆಸಿ ಅವರ ಶತಕದ ಜೊತೆಯಾಟದಿಂದ ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಪಡೆಯಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಬೆಂಗಳೂರು ತಂಡದ ನಾಯಕ ಪಾಫ್ ಡುಪ್ಲೆಸಿ ಮುಂಬೈ ಇಂಡಿಯನ್ಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆದರೆ ಶಿಸ್ತು ಬದ್ಧ ಬೌಲಿಂಗ್ ನಡೆಸಿದ ಆರ್ ಸಿಬಿ ಎದುರು ಬಲಿಷ್ಠ ಮುಂಬೈ ತಂಡದ ಬ್ಯಾಟಿಂಗ್ ಪಡೆ ಮಂಕಾಗಿತ್ತು.
20 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದವರು ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಸೂರ್ಯ ಕುಮಾರ್ ಯಾದವ್ (15) ಹಾಗೂ ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ (84) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿದರು.
172 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡಕ್ಕೆ ಈ ಮೊತ್ತ ಸವಾಲು ಎನಿಸಲಿಲ್ಲ, ಛೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ (82) ಹಾಗೂ ನಾಯಕ ಪಾಫ್ ಡುಪ್ಲೆಸಿ (73) ಮೊದಲ ವಿಕೆಟ್ ಜೊತೆಯಾಟಕ್ಕೆ 143 ರನ್ ಗಳಿಸಿದರು, ನಂತರ ಬಂದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (0) ನಿರಾಸೆ ಮೂಡಿಸಿದರು.
ವಿರಾಟ್ ಕೊಹ್ಲಿ ಜೊತೆಯಾದ ಮ್ಯಾಕ್ಸ್ ವೆಲ್ (12) ಗೆಲುವಿನ ದಡ ಸೇರಿಸಿದರು, ಮುಂಬೈ ತಂಡದ ಎಲ್ಲಾ ಬೌಲರ್ಗಳು ದುಬಾರಿಯಾದರು, ಉತ್ತಮ ಪ್ರದರ್ಶನ ತೋರಿದ ನಾಯಕ ಪಾಫ್ ಡುಪ್ಲೆಸಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…