ಗುವಾಹಟಿ: ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕ ಹಾಗೂ ನಾಯಕ ರೋಹಿತ್ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಭಾರತ ತಂಡ 67 ರನ್ಗಳ ಬೃಹತ್ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1 – 0 ಮುನ್ನಡೆ ಸಾಧಿಸಿತು.
2023 ರ ಸೆಪ್ಟೆಂಬರ್ – ನವೆಂಬರ್ ತಿಂಗಳಲ್ಲಿ ನಡೆಯುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ವರ್ಷದ ಮೊದಲ ಏಕದಿನ ಸರಣಿಯಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ 7 ವಿಕೆಟ್ ಕಳೆದುಕೊಂಡು 373 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು.
ಟಾಸ್ ಗೆದ್ದು ಬೌಲಿಂಗ್ ಪ್ರಾರಂಭಿಸಿದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕಾ ಅವರ ನಿರ್ಧಾರ ಕೈಗೂಡಲಿಲ್ಲ, ಬ್ಯಾಟಿಂಗ್ ಆರಂಭಿಸಿದ ಭಾರತೀಯ ಆರಂಭಿಕ ಜೋಡಿ ಮೊದಲ ವಿಕೆಟ್ ಗೆ 143 ರನ್ಗಳ ಉತ್ತಮ ಆರಂಭವನ್ನೇ ಪಡೆಯಿತು, ನಾಯಕ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 3 ಸಿಕ್ಸ್ ಸೇರಿದಂತೆ (83) ರನ್ ಹಾಗೂ ಶುಭ್ ಮನ್ ಗಿಲ್ 11 ಬೌಂಡರಿ ಸೇರಿದಂತೆ (70) ರನ್ ಗಳಿಸಿ ಭದ್ರ ಬುನಾದಿ ಹಾಕಿದರು.
ಶುಭ್ ಮನ್ ಗಿಲ್ ಔಟಾದ ನಂತರ ಕ್ರಿಸ್ ಗೆ ಬಂದ ಹಿರಿಯ ಆಟಗಾರ ವಿರಾಟ್ ಕೊಹ್ಲಿ ದಾಖಲೆಯ ಶತಕ (113) ರನ್ ಗಳಿಸಿದರೆ, ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ ಉಪಯುಕ್ತ ಕಾಣಿಕೆ ನೀಡುವ ಮೂಲಕ 373 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದರು.
ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ಲಂಕಾ ತಂಡದ ಆರಂಭ ಉತ್ತಮವಾಗಿರಲಿಲ್ಲ, ಆರಂಭಿಕ ಬ್ಯಾಟ್ಸ್ಮನ್ ಅವಿಶ್ಕೋ ಫರ್ನಾಂಡೊ ತಂಡದ ಮೊತ್ತ 19 ರನ್ ಕಲೆಹಾಕಿದಾಗ ವೇಗದ ಬೌಲರ್ ಸಿರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಕುಶಾಲ್ ಮೆಂಡಿಸ್ ಸೊನ್ನೆ ಸುತ್ತಿದರು. ಆರಂಭಿಕ ಬ್ಯಾಟ್ಸ್ಮನ್ ನಿಸಾಂಕ (72) ರನ್ ಹಾಗೂ ಧನಂಜಯ ಡಿ ಸಿಲ್ವಾ (47) ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು.
ನಾಯಕ ಶನಕಾ ಹೋರಾಟ ವ್ಯರ್ಥ : ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೆಚ್ಚದೆಯ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದ ಪ್ರವಾಸಿ ತಂಡದ ನಾಯಕ ದಸುನ್ ಶನಕಾ ಅವರ ಮನಮೋಹಕ ಬ್ಯಾಟಿಂಗ್ ಪ್ರದರ್ಶಿಸಿದರು, 12 ಬೌಂಡರಿ ಹಾಗೂ 3 ಸಿಕ್ಸ್ ಸೇರಿದಂತೆ 88 ಎಸೆತಗಳಲ್ಲಿ (108) ರನ್ ಗಳಿಸಿ ತಂಡವನ್ನು ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಿಂದ ಪಾರು ಮಾಡುವ ಮೂಲಕ 300 ರನ್ ಗಡಿ ದಾಟಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ಭಾರತದ ಪರವಾಗಿ ಬೌಲರ್ ಉಮ್ರಾನ್ ಮಲ್ಲಿಕ್ (3), ಮಹಮ್ಮದ್ ಸಿರಾಜ್ (2), ಚಹಲ್, ಶಮಿ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದುಕೊಂಡರು.
ಭಾರತದ ಪರವಾಗಿ ಎಲ್ಲಾ ಮಾದರಿಗಳಲ್ಲಿ ದಾಖಲೆಯ 73 ನೇ ಶತಕ ಗಳಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…