ಕೊಹ್ಲಿ ದಾಖಲೆಯ ಶತಕ! ಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಗುವಾಹಟಿ: ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕ ಹಾಗೂ ನಾಯಕ ರೋಹಿತ್ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಭಾರತ ತಂಡ 67 ರನ್‌ಗಳ ಬೃಹತ್ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1 – 0 ಮುನ್ನಡೆ ಸಾಧಿಸಿತು.

2023 ರ ಸೆಪ್ಟೆಂಬರ್ – ನವೆಂಬರ್ ತಿಂಗಳಲ್ಲಿ ನಡೆಯುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ವರ್ಷದ ಮೊದಲ ಏಕದಿನ ಸರಣಿಯಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ 7 ವಿಕೆಟ್‌ ಕಳೆದುಕೊಂಡು 373 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು.

ಟಾಸ್ ಗೆದ್ದು ಬೌಲಿಂಗ್ ಪ್ರಾರಂಭಿಸಿದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕಾ ಅವರ ನಿರ್ಧಾರ ಕೈಗೂಡಲಿಲ್ಲ, ಬ್ಯಾಟಿಂಗ್ ಆರಂಭಿಸಿದ ಭಾರತೀಯ ಆರಂಭಿಕ ಜೋಡಿ ಮೊದಲ ವಿಕೆಟ್ ಗೆ 143 ರನ್‌ಗಳ ಉತ್ತಮ ಆರಂಭವನ್ನೇ ಪಡೆಯಿತು, ನಾಯಕ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 3 ಸಿಕ್ಸ್ ಸೇರಿದಂತೆ (83) ರನ್ ಹಾಗೂ ಶುಭ್ ಮನ್ ಗಿಲ್ 11 ಬೌಂಡರಿ ಸೇರಿದಂತೆ (70) ರನ್ ಗಳಿಸಿ ಭದ್ರ ಬುನಾದಿ ಹಾಕಿದರು.

ಶುಭ್ ಮನ್ ಗಿಲ್ ಔಟಾದ ನಂತರ ಕ್ರಿಸ್ ಗೆ ಬಂದ ಹಿರಿಯ ಆಟಗಾರ ವಿರಾಟ್ ಕೊಹ್ಲಿ ದಾಖಲೆಯ ಶತಕ (113) ರನ್ ಗಳಿಸಿದರೆ, ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆ. ಎಲ್. ರಾಹುಲ್ ಉಪಯುಕ್ತ ಕಾಣಿಕೆ ನೀಡುವ ಮೂಲಕ 373 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದರು.

ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ಲಂಕಾ ತಂಡದ ಆರಂಭ ಉತ್ತಮವಾಗಿರಲಿಲ್ಲ, ಆರಂಭಿಕ ಬ್ಯಾಟ್ಸ್‌ಮನ್ ಅವಿಶ್ಕೋ ಫರ್ನಾಂಡೊ ತಂಡದ ಮೊತ್ತ 19 ರನ್ ಕಲೆಹಾಕಿದಾಗ ವೇಗದ ಬೌಲರ್ ಸಿರಾಜ್ ಅವರಿಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಕುಶಾಲ್ ಮೆಂಡಿಸ್ ಸೊನ್ನೆ ಸುತ್ತಿದರು. ಆರಂಭಿಕ ಬ್ಯಾಟ್ಸ್‌ಮನ್ ನಿಸಾಂಕ (72) ರನ್ ಹಾಗೂ ಧನಂಜಯ ಡಿ ಸಿಲ್ವಾ (47) ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು.

ನಾಯಕ ಶನಕಾ ಹೋರಾಟ ವ್ಯರ್ಥ : ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೆಚ್ಚದೆಯ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದ ಪ್ರವಾಸಿ ತಂಡದ ನಾಯಕ ದಸುನ್ ಶನಕಾ ಅವರ ಮನಮೋಹಕ ಬ್ಯಾಟಿಂಗ್ ಪ್ರದರ್ಶಿಸಿದರು, 12 ಬೌಂಡರಿ ಹಾಗೂ 3 ಸಿಕ್ಸ್ ಸೇರಿದಂತೆ 88 ಎಸೆತಗಳಲ್ಲಿ (108) ರನ್ ಗಳಿಸಿ ತಂಡವನ್ನು ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಿಂದ ಪಾರು ಮಾಡುವ ಮೂಲಕ 300 ರನ್ ಗಡಿ ದಾಟಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಭಾರತದ ಪರವಾಗಿ ಬೌಲರ್ ಉಮ್ರಾನ್ ಮಲ್ಲಿಕ್ (3), ಮಹಮ್ಮದ್ ಸಿರಾಜ್ (2), ಚಹಲ್, ಶಮಿ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದುಕೊಂಡರು.

ಭಾರತದ ಪರವಾಗಿ ಎಲ್ಲಾ ಮಾದರಿಗಳಲ್ಲಿ ದಾಖಲೆಯ 73 ನೇ ಶತಕ ಗಳಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago