ಕೊಹ್ಲಿ – ರಾಹುಲ್ ದ್ವಿಶತಕದ ಜೊತೆಯಾಟ: ಪಾಕ್ ವಿರುದ್ಧ ಟೀಂ ಇಂಡಿಯಾಗೆ ಬೃಹತ್ ರನ್ ಗಳ ಗೆಲುವು!

ಕೊಲಂಬೊದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಹಿರಿಯ ಆಟಗಾರ ವಿರಾಟ್ ಕೋಹ್ಲಿ (122*) ಹಾಗೂ ಕನ್ನಡಿಗ ಕೆ.ಎಲ್, ರಾಹುಲ್ (111*) ರನ್ ಗಳಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದರು.

ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಾಮ್ ಬೌಲಿಂಗ್ ಆಯ್ದುಕೊಂಡರು ಆದರೆ ಅವರ ಬೌಲಿಂಗ್ ವಿಭಾಗ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ, ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ (58) ಹಾಗೂ ನಾಯಕ ರೋಹಿತ್ ಶರ್ಮಾ (56) ಮೊದಲ ವಿಕೆಟ್ ಜೊತೆಯಾಟಕ್ಕೆ 121ರನ್ ಗಳಿಸಿ ಭದ್ರ ಬುನಾದಿಯನ್ನು ಹಾಕಿದರು.

ಪಾಕಿಸ್ತಾನದ ಬೌಲಿಂಗ್ ವಿಭಾಗದ ಶಾಬದ್ ಖಾನ್ ಮೊದಲ ವಿಕೆಟ್ ರೋಹಿತ್ ರೂಪದಲ್ಲಿ ಪಡೆದರೆ , ವೇಗಿ ಶಾಹೀನ್ ಅಫ್ರಿದಿ, ಶುಭ್ಮನ್ ಗಿಲ್ ನ ವಿಕೆಟ್ ಪಡೆದರು, ನಂತರ ಬಂದ ವಿರಾಟ್ ಕೊಹ್ಲಿ 122* ಒಂಭತ್ತು ಫೋರ್ ಹಾಗೂ ಮೂರು ಸಿಕ್ಸರ್ ಸಿಡಿಸಿ ಏಕದಿನ ಕ್ರಿಕೆಟ್ ನಲ್ಲಿ ತಮ್ಮ 47ನೇ ಶತಕ ಹಾಗೂ 13,000 ರನ್ ಗಳಿಸಿದ ವಿಶ್ವದ ಆರನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು.

ವಿರಾಟ್ ಕೊಹ್ಲಿಗೆ ಸಾಥ್ ನೀಡಿದ ಕನ್ನಡಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ 111* ಹನ್ನೆರಡು ಫೋರ್ ಹಾಗೂ ಎರಡು ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ಗಾಯಗೊಂಡು ಸತತ ನಾಲ್ಕು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನಂತರ ಮರಳಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ್ದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.

ಬೃಹತ್ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಗಳು ಯಾರೂ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ, ಆರಂಭಿಕ ಆಟಗಾರರಾದ ಫಾಕರ್ ಜ್ಹಮಾನ್(27) ಹಾಗೂ ಇಮಾಮ್ ಉಲ್ ಹಕ್ (9), ಹಾಗೂ ನಾಯಕ ಬಾಬರ್ ಅಜಾಮ್ (10), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (2)ರನ್ ಗಳಿಸುವ ಮೂಲಕ ಪಾಕ್ ಮೊದಲೇ ಸೋಲನ್ನು ಒಪ್ಪಿಕೊಂಡಿತು.

ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 5 ವಿಕೆಟ್ ಗೊಂಚಲು ಪಡೆದರೆ, ವೇಗಿಗಳಾದ ಬುಮ್ರಾ, ಶಾದೂ೯ಲ್ ಠಾಕೂರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದು ಪಾಕ್ ತಂಡವನ್ನು 128ಕ್ಕೆ ಆಲೌಟ್ ಮಾಡುವ ಮೂಲಕ 228 ರನ್ ಗಳ ಗೆಲುವು ತಂದುಕೊಟ್ಟರು.

ಹೆಚ್ಚು ರನ್ ಗಳ ಹೊಳೆ ಹರಿಸಿದ ಹಿನ್ನೆಲೆ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

2 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

15 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

15 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

20 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

22 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

1 day ago