ಕೊಲಂಬೊದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಹಿರಿಯ ಆಟಗಾರ ವಿರಾಟ್ ಕೋಹ್ಲಿ (122*) ಹಾಗೂ ಕನ್ನಡಿಗ ಕೆ.ಎಲ್, ರಾಹುಲ್ (111*) ರನ್ ಗಳಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದರು.
ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಾಮ್ ಬೌಲಿಂಗ್ ಆಯ್ದುಕೊಂಡರು ಆದರೆ ಅವರ ಬೌಲಿಂಗ್ ವಿಭಾಗ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ, ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ (58) ಹಾಗೂ ನಾಯಕ ರೋಹಿತ್ ಶರ್ಮಾ (56) ಮೊದಲ ವಿಕೆಟ್ ಜೊತೆಯಾಟಕ್ಕೆ 121ರನ್ ಗಳಿಸಿ ಭದ್ರ ಬುನಾದಿಯನ್ನು ಹಾಕಿದರು.
ವಿರಾಟ್ ಕೊಹ್ಲಿಗೆ ಸಾಥ್ ನೀಡಿದ ಕನ್ನಡಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ 111* ಹನ್ನೆರಡು ಫೋರ್ ಹಾಗೂ ಎರಡು ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ಗಾಯಗೊಂಡು ಸತತ ನಾಲ್ಕು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನಂತರ ಮರಳಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ್ದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.
ಬೃಹತ್ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಗಳು ಯಾರೂ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ, ಆರಂಭಿಕ ಆಟಗಾರರಾದ ಫಾಕರ್ ಜ್ಹಮಾನ್(27) ಹಾಗೂ ಇಮಾಮ್ ಉಲ್ ಹಕ್ (9), ಹಾಗೂ ನಾಯಕ ಬಾಬರ್ ಅಜಾಮ್ (10), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (2)ರನ್ ಗಳಿಸುವ ಮೂಲಕ ಪಾಕ್ ಮೊದಲೇ ಸೋಲನ್ನು ಒಪ್ಪಿಕೊಂಡಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…