ಕೊಲಂಬೊದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಹಿರಿಯ ಆಟಗಾರ ವಿರಾಟ್ ಕೋಹ್ಲಿ (122*) ಹಾಗೂ ಕನ್ನಡಿಗ ಕೆ.ಎಲ್, ರಾಹುಲ್ (111*) ರನ್ ಗಳಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದರು.
ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಾಮ್ ಬೌಲಿಂಗ್ ಆಯ್ದುಕೊಂಡರು ಆದರೆ ಅವರ ಬೌಲಿಂಗ್ ವಿಭಾಗ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ, ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ (58) ಹಾಗೂ ನಾಯಕ ರೋಹಿತ್ ಶರ್ಮಾ (56) ಮೊದಲ ವಿಕೆಟ್ ಜೊತೆಯಾಟಕ್ಕೆ 121ರನ್ ಗಳಿಸಿ ಭದ್ರ ಬುನಾದಿಯನ್ನು ಹಾಕಿದರು.
ವಿರಾಟ್ ಕೊಹ್ಲಿಗೆ ಸಾಥ್ ನೀಡಿದ ಕನ್ನಡಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ 111* ಹನ್ನೆರಡು ಫೋರ್ ಹಾಗೂ ಎರಡು ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ಗಾಯಗೊಂಡು ಸತತ ನಾಲ್ಕು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನಂತರ ಮರಳಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ್ದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.
ಬೃಹತ್ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಗಳು ಯಾರೂ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ, ಆರಂಭಿಕ ಆಟಗಾರರಾದ ಫಾಕರ್ ಜ್ಹಮಾನ್(27) ಹಾಗೂ ಇಮಾಮ್ ಉಲ್ ಹಕ್ (9), ಹಾಗೂ ನಾಯಕ ಬಾಬರ್ ಅಜಾಮ್ (10), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (2)ರನ್ ಗಳಿಸುವ ಮೂಲಕ ಪಾಕ್ ಮೊದಲೇ ಸೋಲನ್ನು ಒಪ್ಪಿಕೊಂಡಿತು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…