ಕೊಲಂಬೊದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಹಿರಿಯ ಆಟಗಾರ ವಿರಾಟ್ ಕೋಹ್ಲಿ (122*) ಹಾಗೂ ಕನ್ನಡಿಗ ಕೆ.ಎಲ್, ರಾಹುಲ್ (111*) ರನ್ ಗಳಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದರು.
ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಾಮ್ ಬೌಲಿಂಗ್ ಆಯ್ದುಕೊಂಡರು ಆದರೆ ಅವರ ಬೌಲಿಂಗ್ ವಿಭಾಗ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ, ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ (58) ಹಾಗೂ ನಾಯಕ ರೋಹಿತ್ ಶರ್ಮಾ (56) ಮೊದಲ ವಿಕೆಟ್ ಜೊತೆಯಾಟಕ್ಕೆ 121ರನ್ ಗಳಿಸಿ ಭದ್ರ ಬುನಾದಿಯನ್ನು ಹಾಕಿದರು.
ವಿರಾಟ್ ಕೊಹ್ಲಿಗೆ ಸಾಥ್ ನೀಡಿದ ಕನ್ನಡಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ 111* ಹನ್ನೆರಡು ಫೋರ್ ಹಾಗೂ ಎರಡು ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ಗಾಯಗೊಂಡು ಸತತ ನಾಲ್ಕು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನಂತರ ಮರಳಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ್ದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.
ಬೃಹತ್ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಗಳು ಯಾರೂ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ, ಆರಂಭಿಕ ಆಟಗಾರರಾದ ಫಾಕರ್ ಜ್ಹಮಾನ್(27) ಹಾಗೂ ಇಮಾಮ್ ಉಲ್ ಹಕ್ (9), ಹಾಗೂ ನಾಯಕ ಬಾಬರ್ ಅಜಾಮ್ (10), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (2)ರನ್ ಗಳಿಸುವ ಮೂಲಕ ಪಾಕ್ ಮೊದಲೇ ಸೋಲನ್ನು ಒಪ್ಪಿಕೊಂಡಿತು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…