ಕೊಲಂಬೊದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಹಿರಿಯ ಆಟಗಾರ ವಿರಾಟ್ ಕೋಹ್ಲಿ (122*) ಹಾಗೂ ಕನ್ನಡಿಗ ಕೆ.ಎಲ್, ರಾಹುಲ್ (111*) ರನ್ ಗಳಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದರು.
ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಾಮ್ ಬೌಲಿಂಗ್ ಆಯ್ದುಕೊಂಡರು ಆದರೆ ಅವರ ಬೌಲಿಂಗ್ ವಿಭಾಗ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ, ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ (58) ಹಾಗೂ ನಾಯಕ ರೋಹಿತ್ ಶರ್ಮಾ (56) ಮೊದಲ ವಿಕೆಟ್ ಜೊತೆಯಾಟಕ್ಕೆ 121ರನ್ ಗಳಿಸಿ ಭದ್ರ ಬುನಾದಿಯನ್ನು ಹಾಕಿದರು.
ವಿರಾಟ್ ಕೊಹ್ಲಿಗೆ ಸಾಥ್ ನೀಡಿದ ಕನ್ನಡಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ 111* ಹನ್ನೆರಡು ಫೋರ್ ಹಾಗೂ ಎರಡು ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ಗಾಯಗೊಂಡು ಸತತ ನಾಲ್ಕು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನಂತರ ಮರಳಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ್ದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.
ಬೃಹತ್ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಗಳು ಯಾರೂ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ, ಆರಂಭಿಕ ಆಟಗಾರರಾದ ಫಾಕರ್ ಜ್ಹಮಾನ್(27) ಹಾಗೂ ಇಮಾಮ್ ಉಲ್ ಹಕ್ (9), ಹಾಗೂ ನಾಯಕ ಬಾಬರ್ ಅಜಾಮ್ (10), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (2)ರನ್ ಗಳಿಸುವ ಮೂಲಕ ಪಾಕ್ ಮೊದಲೇ ಸೋಲನ್ನು ಒಪ್ಪಿಕೊಂಡಿತು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…