ಕೊಲಂಬೊದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಹಿರಿಯ ಆಟಗಾರ ವಿರಾಟ್ ಕೋಹ್ಲಿ (122*) ಹಾಗೂ ಕನ್ನಡಿಗ ಕೆ.ಎಲ್, ರಾಹುಲ್ (111*) ರನ್ ಗಳಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದರು.
ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಾಮ್ ಬೌಲಿಂಗ್ ಆಯ್ದುಕೊಂಡರು ಆದರೆ ಅವರ ಬೌಲಿಂಗ್ ವಿಭಾಗ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ, ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ (58) ಹಾಗೂ ನಾಯಕ ರೋಹಿತ್ ಶರ್ಮಾ (56) ಮೊದಲ ವಿಕೆಟ್ ಜೊತೆಯಾಟಕ್ಕೆ 121ರನ್ ಗಳಿಸಿ ಭದ್ರ ಬುನಾದಿಯನ್ನು ಹಾಕಿದರು.
ವಿರಾಟ್ ಕೊಹ್ಲಿಗೆ ಸಾಥ್ ನೀಡಿದ ಕನ್ನಡಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ 111* ಹನ್ನೆರಡು ಫೋರ್ ಹಾಗೂ ಎರಡು ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ಗಾಯಗೊಂಡು ಸತತ ನಾಲ್ಕು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನಂತರ ಮರಳಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ್ದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.
ಬೃಹತ್ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಗಳು ಯಾರೂ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ, ಆರಂಭಿಕ ಆಟಗಾರರಾದ ಫಾಕರ್ ಜ್ಹಮಾನ್(27) ಹಾಗೂ ಇಮಾಮ್ ಉಲ್ ಹಕ್ (9), ಹಾಗೂ ನಾಯಕ ಬಾಬರ್ ಅಜಾಮ್ (10), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (2)ರನ್ ಗಳಿಸುವ ಮೂಲಕ ಪಾಕ್ ಮೊದಲೇ ಸೋಲನ್ನು ಒಪ್ಪಿಕೊಂಡಿತು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…