ಕೊಲಂಬೊದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಹಿರಿಯ ಆಟಗಾರ ವಿರಾಟ್ ಕೋಹ್ಲಿ (122*) ಹಾಗೂ ಕನ್ನಡಿಗ ಕೆ.ಎಲ್, ರಾಹುಲ್ (111*) ರನ್ ಗಳಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದರು.
ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಾಮ್ ಬೌಲಿಂಗ್ ಆಯ್ದುಕೊಂಡರು ಆದರೆ ಅವರ ಬೌಲಿಂಗ್ ವಿಭಾಗ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ, ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ (58) ಹಾಗೂ ನಾಯಕ ರೋಹಿತ್ ಶರ್ಮಾ (56) ಮೊದಲ ವಿಕೆಟ್ ಜೊತೆಯಾಟಕ್ಕೆ 121ರನ್ ಗಳಿಸಿ ಭದ್ರ ಬುನಾದಿಯನ್ನು ಹಾಕಿದರು.
ವಿರಾಟ್ ಕೊಹ್ಲಿಗೆ ಸಾಥ್ ನೀಡಿದ ಕನ್ನಡಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ 111* ಹನ್ನೆರಡು ಫೋರ್ ಹಾಗೂ ಎರಡು ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ಗಾಯಗೊಂಡು ಸತತ ನಾಲ್ಕು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನಂತರ ಮರಳಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ್ದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.
ಬೃಹತ್ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಗಳು ಯಾರೂ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ, ಆರಂಭಿಕ ಆಟಗಾರರಾದ ಫಾಕರ್ ಜ್ಹಮಾನ್(27) ಹಾಗೂ ಇಮಾಮ್ ಉಲ್ ಹಕ್ (9), ಹಾಗೂ ನಾಯಕ ಬಾಬರ್ ಅಜಾಮ್ (10), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (2)ರನ್ ಗಳಿಸುವ ಮೂಲಕ ಪಾಕ್ ಮೊದಲೇ ಸೋಲನ್ನು ಒಪ್ಪಿಕೊಂಡಿತು.
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…