ಕೊಹ್ಲಿ – ರಾಹುಲ್ ದ್ವಿಶತಕದ ಜೊತೆಯಾಟ: ಪಾಕ್ ವಿರುದ್ಧ ಟೀಂ ಇಂಡಿಯಾಗೆ ಬೃಹತ್ ರನ್ ಗಳ ಗೆಲುವು!

ಕೊಲಂಬೊದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಹಿರಿಯ ಆಟಗಾರ ವಿರಾಟ್ ಕೋಹ್ಲಿ (122*) ಹಾಗೂ ಕನ್ನಡಿಗ ಕೆ.ಎಲ್, ರಾಹುಲ್ (111*) ರನ್ ಗಳಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದರು.

ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಾಮ್ ಬೌಲಿಂಗ್ ಆಯ್ದುಕೊಂಡರು ಆದರೆ ಅವರ ಬೌಲಿಂಗ್ ವಿಭಾಗ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ, ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ (58) ಹಾಗೂ ನಾಯಕ ರೋಹಿತ್ ಶರ್ಮಾ (56) ಮೊದಲ ವಿಕೆಟ್ ಜೊತೆಯಾಟಕ್ಕೆ 121ರನ್ ಗಳಿಸಿ ಭದ್ರ ಬುನಾದಿಯನ್ನು ಹಾಕಿದರು.

ಪಾಕಿಸ್ತಾನದ ಬೌಲಿಂಗ್ ವಿಭಾಗದ ಶಾಬದ್ ಖಾನ್ ಮೊದಲ ವಿಕೆಟ್ ರೋಹಿತ್ ರೂಪದಲ್ಲಿ ಪಡೆದರೆ , ವೇಗಿ ಶಾಹೀನ್ ಅಫ್ರಿದಿ, ಶುಭ್ಮನ್ ಗಿಲ್ ನ ವಿಕೆಟ್ ಪಡೆದರು, ನಂತರ ಬಂದ ವಿರಾಟ್ ಕೊಹ್ಲಿ 122* ಒಂಭತ್ತು ಫೋರ್ ಹಾಗೂ ಮೂರು ಸಿಕ್ಸರ್ ಸಿಡಿಸಿ ಏಕದಿನ ಕ್ರಿಕೆಟ್ ನಲ್ಲಿ ತಮ್ಮ 47ನೇ ಶತಕ ಹಾಗೂ 13,000 ರನ್ ಗಳಿಸಿದ ವಿಶ್ವದ ಆರನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು.

ವಿರಾಟ್ ಕೊಹ್ಲಿಗೆ ಸಾಥ್ ನೀಡಿದ ಕನ್ನಡಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ 111* ಹನ್ನೆರಡು ಫೋರ್ ಹಾಗೂ ಎರಡು ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ಗಾಯಗೊಂಡು ಸತತ ನಾಲ್ಕು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನಂತರ ಮರಳಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ್ದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.

ಬೃಹತ್ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಗಳು ಯಾರೂ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ, ಆರಂಭಿಕ ಆಟಗಾರರಾದ ಫಾಕರ್ ಜ್ಹಮಾನ್(27) ಹಾಗೂ ಇಮಾಮ್ ಉಲ್ ಹಕ್ (9), ಹಾಗೂ ನಾಯಕ ಬಾಬರ್ ಅಜಾಮ್ (10), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (2)ರನ್ ಗಳಿಸುವ ಮೂಲಕ ಪಾಕ್ ಮೊದಲೇ ಸೋಲನ್ನು ಒಪ್ಪಿಕೊಂಡಿತು.

ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 5 ವಿಕೆಟ್ ಗೊಂಚಲು ಪಡೆದರೆ, ವೇಗಿಗಳಾದ ಬುಮ್ರಾ, ಶಾದೂ೯ಲ್ ಠಾಕೂರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದು ಪಾಕ್ ತಂಡವನ್ನು 128ಕ್ಕೆ ಆಲೌಟ್ ಮಾಡುವ ಮೂಲಕ 228 ರನ್ ಗಳ ಗೆಲುವು ತಂದುಕೊಟ್ಟರು.

ಹೆಚ್ಚು ರನ್ ಗಳ ಹೊಳೆ ಹರಿಸಿದ ಹಿನ್ನೆಲೆ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

1 hour ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

21 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago