ಕೊಹ್ಲಿ – ರಾಹುಲ್ ದ್ವಿಶತಕದ ಜೊತೆಯಾಟ: ಪಾಕ್ ವಿರುದ್ಧ ಟೀಂ ಇಂಡಿಯಾಗೆ ಬೃಹತ್ ರನ್ ಗಳ ಗೆಲುವು!

ಕೊಲಂಬೊದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ಹಿರಿಯ ಆಟಗಾರ ವಿರಾಟ್ ಕೋಹ್ಲಿ (122*) ಹಾಗೂ ಕನ್ನಡಿಗ ಕೆ.ಎಲ್, ರಾಹುಲ್ (111*) ರನ್ ಗಳಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ಪುಡಿಗಟ್ಟಿದರು.

ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಾಮ್ ಬೌಲಿಂಗ್ ಆಯ್ದುಕೊಂಡರು ಆದರೆ ಅವರ ಬೌಲಿಂಗ್ ವಿಭಾಗ ಅವರ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ, ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ (58) ಹಾಗೂ ನಾಯಕ ರೋಹಿತ್ ಶರ್ಮಾ (56) ಮೊದಲ ವಿಕೆಟ್ ಜೊತೆಯಾಟಕ್ಕೆ 121ರನ್ ಗಳಿಸಿ ಭದ್ರ ಬುನಾದಿಯನ್ನು ಹಾಕಿದರು.

ಪಾಕಿಸ್ತಾನದ ಬೌಲಿಂಗ್ ವಿಭಾಗದ ಶಾಬದ್ ಖಾನ್ ಮೊದಲ ವಿಕೆಟ್ ರೋಹಿತ್ ರೂಪದಲ್ಲಿ ಪಡೆದರೆ , ವೇಗಿ ಶಾಹೀನ್ ಅಫ್ರಿದಿ, ಶುಭ್ಮನ್ ಗಿಲ್ ನ ವಿಕೆಟ್ ಪಡೆದರು, ನಂತರ ಬಂದ ವಿರಾಟ್ ಕೊಹ್ಲಿ 122* ಒಂಭತ್ತು ಫೋರ್ ಹಾಗೂ ಮೂರು ಸಿಕ್ಸರ್ ಸಿಡಿಸಿ ಏಕದಿನ ಕ್ರಿಕೆಟ್ ನಲ್ಲಿ ತಮ್ಮ 47ನೇ ಶತಕ ಹಾಗೂ 13,000 ರನ್ ಗಳಿಸಿದ ವಿಶ್ವದ ಆರನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು.

ವಿರಾಟ್ ಕೊಹ್ಲಿಗೆ ಸಾಥ್ ನೀಡಿದ ಕನ್ನಡಿಗ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ. ಎಲ್. ರಾಹುಲ್ 111* ಹನ್ನೆರಡು ಫೋರ್ ಹಾಗೂ ಎರಡು ಸಿಕ್ಸರ್ ಸಿಡಿಸಿ ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ಗಾಯಗೊಂಡು ಸತತ ನಾಲ್ಕು ತಿಂಗಳು ಕ್ರಿಕೆಟ್ ನಿಂದ ದೂರವಿದ್ದು ನಂತರ ಮರಳಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ್ದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದೆ.

ಬೃಹತ್ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಗಳು ಯಾರೂ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ, ಆರಂಭಿಕ ಆಟಗಾರರಾದ ಫಾಕರ್ ಜ್ಹಮಾನ್(27) ಹಾಗೂ ಇಮಾಮ್ ಉಲ್ ಹಕ್ (9), ಹಾಗೂ ನಾಯಕ ಬಾಬರ್ ಅಜಾಮ್ (10), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (2)ರನ್ ಗಳಿಸುವ ಮೂಲಕ ಪಾಕ್ ಮೊದಲೇ ಸೋಲನ್ನು ಒಪ್ಪಿಕೊಂಡಿತು.

ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 5 ವಿಕೆಟ್ ಗೊಂಚಲು ಪಡೆದರೆ, ವೇಗಿಗಳಾದ ಬುಮ್ರಾ, ಶಾದೂ೯ಲ್ ಠಾಕೂರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದು ಪಾಕ್ ತಂಡವನ್ನು 128ಕ್ಕೆ ಆಲೌಟ್ ಮಾಡುವ ಮೂಲಕ 228 ರನ್ ಗಳ ಗೆಲುವು ತಂದುಕೊಟ್ಟರು.

ಹೆಚ್ಚು ರನ್ ಗಳ ಹೊಳೆ ಹರಿಸಿದ ಹಿನ್ನೆಲೆ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

19 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago