ಕೊಹ್ಲಿ ‘ಶತಕಗಳ ಅರ್ಧಶತಕ’ : ಕೀವೀಸ್ ಗೆ ‘ಶಮಿ’ ಕಾಟ, ವಿಶ್ವಕಪ್ ಫೈನಲ್ ಗೆ ಲಗ್ಗೆ ಇಟ್ಟ ಭಾರತ !

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಶತಕ ಹಾಗೂ ಮೊಹಮದ್ ಶಮಿ ಅವರ ಮಾರಕ ಬೌಲಿಂಗ್ ಪ್ರದರ್ಶನದಿಂದ ಬಲಿಷ್ಠ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದೆ ಹಾಗೂ 2019 ರ ಸೆಮಿಫೈನಲ್ ಪಂದ್ಯದ ಸೇಡು ತೀರಿಸಿಕೊಂಡಿತು.

ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡರು, ನಾಯಕ ರೋಹಿತ್ ಶರ್ಮಾ (47) ಹಾಗೂ ಶುಭಮನ್ ಗಿಲ್ (80)* ಉತ್ತಮ ಆರಂಭ ಒದಗಿಸಿದರು, ಮೊದಲ ವಿಕೆಟ್ ನಷ್ಟಕ್ಕೆ 71 ರನ್ ಕಲೆಹಾಕಿದ್ದಗ ಸೌಥಿ ಬೌಲಿಂಗ್ ನಲ್ಲಿ ಕೇನ್ ವಿಲಿಯಮ್ಸ್ ನ್ ಹಿಡಿದ ಅದ್ಭುತ ಕ್ಯಾಚ್ ಗೆ ಬಲಿಯಾದರು.

ನಂತರ ಒಂದಾದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ಒಂಬತ್ತು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ (117) ರನ್ ಗಳಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ (49) ದಾಖಲೆ ಸರಿಗಟ್ಟಿದರು ಹಾಗೂ (50) ಶತಕ ಸಿಡಿಸಿ ಸಂಭ್ರಮಿಸಿದರು.

ನೆದರ್ಲೆಂಡ್ ವಿರುದ್ಧ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶತಕ ಸಿಡಿಸಿದ್ದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ವಾಂಖೆಡೆ ಮೈದಾನದಲ್ಲಿ ನಾಲ್ಕು ಬೌಂಡರಿ ಹಾಗೂ ಎಂಟು ಸಿಕ್ಸರ್ ಸಿಡಿಸಿ ಬಿರುಸಿನ (105) ರನ್ ಗಳಿಸಿದರು.

ಕೊಹ್ಲಿ ಔಟಾದ ನಂತರ ಕ್ರಿಸ್ ಗೆ ಬಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ (39) ರನ್ ಗಳಿಸಿ ತಂಡದ ಮೊತ್ತವನ್ನು 400 ರ ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ನ್ಯೂಜಿಲ್ಯಾಂಡ್ ತಂಡದ ಆರಂಭಿಕ ಆಟಗಾರರಾದ ಕಾನ್ವೆ(13) ಹಾಗೂ ರಚಿನ್ ರವೀಂದ್ರ (13) ಅವರನ್ನು ಮೊಹಮ್ಮದ್ ಶಮಿ ಪೆವಿಲಿಯನ್ ಗೆ ಕಳಿಸಿದರು, ಆದರೆ ನಂತರ ಬಂದ ನಾಯಕ ಕೆನ್ ವಿಲಿಯಮ್ಸ್ ನ್ (69) ಹಾಗೂ ಮಿಚೆಲ್ (134) ಒಂದು ಹಂತದಲ್ಲಿ ಗೆಲುವಿನ ಕಡೆ ಮುಖ ಮಾಡಿದ್ದರು ಆದರೆ ಶಮಿ ಅದಕ್ಕೆ ಅವಕಾಶ ನೀಡಲಿಲ್ಲ.

ನಂತರ ಬಂದ ಮಧ್ಯಮ ಕ್ರಮಾಂಕದ ಆಟಗಾರರಾದ ಲಾಥಮ್ (0), ಫಿಲಿಪ್ಸ್ (41), ಚಾಂಪನ್ (2), ಸ್ಯಾಂಟ್ನರ್ (9) ರನ್ ಗಳಿಸಿದರು, ಭಾರತದ ಪರವಾಗಿ ವೇಗಿ ಮೊಹಮ್ಮದ್ ಶಮಿ 7 ವಿಕೆಟ್ ಪಡೆದು ಮಿಂಚಿದರೆ ಸಿರಾಜ್, ಬುಮ್ರಾ ಹಾಗೂ ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು, ಉತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

8 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

9 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

17 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

22 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago