ಕೊಹ್ಲಿ ‘ಶತಕಗಳ ಅರ್ಧಶತಕ’ : ಕೀವೀಸ್ ಗೆ ‘ಶಮಿ’ ಕಾಟ, ವಿಶ್ವಕಪ್ ಫೈನಲ್ ಗೆ ಲಗ್ಗೆ ಇಟ್ಟ ಭಾರತ !

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಶತಕ ಹಾಗೂ ಮೊಹಮದ್ ಶಮಿ ಅವರ ಮಾರಕ ಬೌಲಿಂಗ್ ಪ್ರದರ್ಶನದಿಂದ ಬಲಿಷ್ಠ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದೆ ಹಾಗೂ 2019 ರ ಸೆಮಿಫೈನಲ್ ಪಂದ್ಯದ ಸೇಡು ತೀರಿಸಿಕೊಂಡಿತು.

ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡರು, ನಾಯಕ ರೋಹಿತ್ ಶರ್ಮಾ (47) ಹಾಗೂ ಶುಭಮನ್ ಗಿಲ್ (80)* ಉತ್ತಮ ಆರಂಭ ಒದಗಿಸಿದರು, ಮೊದಲ ವಿಕೆಟ್ ನಷ್ಟಕ್ಕೆ 71 ರನ್ ಕಲೆಹಾಕಿದ್ದಗ ಸೌಥಿ ಬೌಲಿಂಗ್ ನಲ್ಲಿ ಕೇನ್ ವಿಲಿಯಮ್ಸ್ ನ್ ಹಿಡಿದ ಅದ್ಭುತ ಕ್ಯಾಚ್ ಗೆ ಬಲಿಯಾದರು.

ನಂತರ ಒಂದಾದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ಒಂಬತ್ತು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ (117) ರನ್ ಗಳಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ (49) ದಾಖಲೆ ಸರಿಗಟ್ಟಿದರು ಹಾಗೂ (50) ಶತಕ ಸಿಡಿಸಿ ಸಂಭ್ರಮಿಸಿದರು.

ನೆದರ್ಲೆಂಡ್ ವಿರುದ್ಧ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶತಕ ಸಿಡಿಸಿದ್ದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ವಾಂಖೆಡೆ ಮೈದಾನದಲ್ಲಿ ನಾಲ್ಕು ಬೌಂಡರಿ ಹಾಗೂ ಎಂಟು ಸಿಕ್ಸರ್ ಸಿಡಿಸಿ ಬಿರುಸಿನ (105) ರನ್ ಗಳಿಸಿದರು.

ಕೊಹ್ಲಿ ಔಟಾದ ನಂತರ ಕ್ರಿಸ್ ಗೆ ಬಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ (39) ರನ್ ಗಳಿಸಿ ತಂಡದ ಮೊತ್ತವನ್ನು 400 ರ ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ನ್ಯೂಜಿಲ್ಯಾಂಡ್ ತಂಡದ ಆರಂಭಿಕ ಆಟಗಾರರಾದ ಕಾನ್ವೆ(13) ಹಾಗೂ ರಚಿನ್ ರವೀಂದ್ರ (13) ಅವರನ್ನು ಮೊಹಮ್ಮದ್ ಶಮಿ ಪೆವಿಲಿಯನ್ ಗೆ ಕಳಿಸಿದರು, ಆದರೆ ನಂತರ ಬಂದ ನಾಯಕ ಕೆನ್ ವಿಲಿಯಮ್ಸ್ ನ್ (69) ಹಾಗೂ ಮಿಚೆಲ್ (134) ಒಂದು ಹಂತದಲ್ಲಿ ಗೆಲುವಿನ ಕಡೆ ಮುಖ ಮಾಡಿದ್ದರು ಆದರೆ ಶಮಿ ಅದಕ್ಕೆ ಅವಕಾಶ ನೀಡಲಿಲ್ಲ.

ನಂತರ ಬಂದ ಮಧ್ಯಮ ಕ್ರಮಾಂಕದ ಆಟಗಾರರಾದ ಲಾಥಮ್ (0), ಫಿಲಿಪ್ಸ್ (41), ಚಾಂಪನ್ (2), ಸ್ಯಾಂಟ್ನರ್ (9) ರನ್ ಗಳಿಸಿದರು, ಭಾರತದ ಪರವಾಗಿ ವೇಗಿ ಮೊಹಮ್ಮದ್ ಶಮಿ 7 ವಿಕೆಟ್ ಪಡೆದು ಮಿಂಚಿದರೆ ಸಿರಾಜ್, ಬುಮ್ರಾ ಹಾಗೂ ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು, ಉತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago